Advertisement
ಸುದ್ದಿಗಳು

ಹಿರಿಯ ನಾಗರಿಕರ ಕ್ರೀಡಾಕೂಟ: ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆ

Share

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಸಲಹೆ ಮಾಡಿದ್ದಾರೆ.

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕ ದಿನಾಚರಣೆ ಪ್ರಯುಕ್ತ ಗುರುವಾರ ನಗರದ ಗಾಂಧಿ ಮೈದಾನದಲ್ಲಿ ನಡೆದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜೀವನವು ನಿಂತ ನೀರಾಗಬಾರದು, ಚಟುವಟಿಕೆಯಿಂದ ಕೂಡಿರಬೇಕು. ಹಿರಿಯರಲ್ಲಿ ಲವಲವಿಕೆ ಇದ್ದರೆ ಹೆಚ್ಚು ಸಂತಸ ಸಿಗುತ್ತದೆ. ಹಿರಿಯರು ತಮ್ಮ ಅನುಭವನ್ನು ಮನೆಯಲ್ಲಿರುವ ಕಿರಿಯರಿಗೆ ತಿಳಿಸಿಕೊಡಬೇಕು. ಇದರಿಂದ ಕಿರಿಯರಲ್ಲಿ ಜೀವನದ ಒಳಗುಟ್ಟು ಅರ್ಥವಾಗುತ್ತದೆ. ಜೊತೆಗೆ ಹಿರಿಯರೊಬ್ಬರು ಮನೆಯಲ್ಲಿದ್ದರೆ ಶ್ರೇಯಸ್ಸು ಹೆಚ್ಚುತ್ತದೆ ಎಂದು ಜಿಲ್ಲಾ ಕಾನೂನು ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ನುಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ ಅವರು ಮಾತನಾಡಿ ಹಿರಿಯ ನಾಗರಿಕರು ತುಂಬಾ ಚಟುವಟಿಕೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಹಿರಿಯ ನಾಗರಿಕರು ಸಮಾಜಕ್ಕೆ ಉತ್ತಮ ಮೌಲ್ಯ ನೀಡುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಿರಿಯರಿಗಾಗಿ ಹಗಲು ಯೋಗ ಕ್ಷೇಮ ಕೇಂದ್ರ ತೆರೆಯಲಾಗಿದೆ ಎಂದರು.

ಹಿರಿಯ ನಾಗರಿಕರಾದ ಮಾದಪ್ಪ ಅವರು ತಮ್ಮ ಸ್ವಾತಂತ್ರ್ಯ ಪೂರ್ವ ದಿನಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ, 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ತಮ್ಮ ಅನುಭವ ಹಂಚಿಕೊಂಡರು.

 

ಹಿರಿಯ ನಾಗರಿಕರು ಒಂದೆಡೆ ಸೇರಿ ಹಲವು ಸಮಸ್ಯೆಗಳು, ಬೇಡಿಕೆಗಳು ಹಾಗೂ ಪರಿಹಾರ ಮಾರ್ಗೋಪಾಯ ಮತ್ತಿತರ ಚರ್ಚೆ ನಡೆಸಲು ಹಿರಿಯರಿಗಾಗಿ ನಿವೇಶನ ಅಗತ್ಯವಿದ್ದು, ನಿವೇಶನ ಒದಗಿಸಿ ‘ಹಿರಿಯ ನಾಗರಿಕರ ಭವನ’ ನಿರ್ಮಾಣಕ್ಕೆ ಅವಕಾಶ ಮಾಡಬೇಕಿದೆ ಎಂದು ಹಿರಿಯರಾದ ಮಾದಪ್ಪ ಅವರು ಮನವಿ ಮಾಡಿದರು.

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಸಂಪತ್‍ಕುಮಾರ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ವೇದಿಕೆಯ ಸದಸ್ಯರು ಇತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

5 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

6 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

15 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

15 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

16 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

20 hours ago