Advertisement
ಸುದ್ದಿಗಳು

ಹಿರಿಯ ನಾಗರಿಕರ ಕ್ರೀಡಾಕೂಟ: ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆ

Share

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಸಲಹೆ ಮಾಡಿದ್ದಾರೆ.

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕ ದಿನಾಚರಣೆ ಪ್ರಯುಕ್ತ ಗುರುವಾರ ನಗರದ ಗಾಂಧಿ ಮೈದಾನದಲ್ಲಿ ನಡೆದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜೀವನವು ನಿಂತ ನೀರಾಗಬಾರದು, ಚಟುವಟಿಕೆಯಿಂದ ಕೂಡಿರಬೇಕು. ಹಿರಿಯರಲ್ಲಿ ಲವಲವಿಕೆ ಇದ್ದರೆ ಹೆಚ್ಚು ಸಂತಸ ಸಿಗುತ್ತದೆ. ಹಿರಿಯರು ತಮ್ಮ ಅನುಭವನ್ನು ಮನೆಯಲ್ಲಿರುವ ಕಿರಿಯರಿಗೆ ತಿಳಿಸಿಕೊಡಬೇಕು. ಇದರಿಂದ ಕಿರಿಯರಲ್ಲಿ ಜೀವನದ ಒಳಗುಟ್ಟು ಅರ್ಥವಾಗುತ್ತದೆ. ಜೊತೆಗೆ ಹಿರಿಯರೊಬ್ಬರು ಮನೆಯಲ್ಲಿದ್ದರೆ ಶ್ರೇಯಸ್ಸು ಹೆಚ್ಚುತ್ತದೆ ಎಂದು ಜಿಲ್ಲಾ ಕಾನೂನು ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ನುಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ ಅವರು ಮಾತನಾಡಿ ಹಿರಿಯ ನಾಗರಿಕರು ತುಂಬಾ ಚಟುವಟಿಕೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಹಿರಿಯ ನಾಗರಿಕರು ಸಮಾಜಕ್ಕೆ ಉತ್ತಮ ಮೌಲ್ಯ ನೀಡುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಿರಿಯರಿಗಾಗಿ ಹಗಲು ಯೋಗ ಕ್ಷೇಮ ಕೇಂದ್ರ ತೆರೆಯಲಾಗಿದೆ ಎಂದರು.

ಹಿರಿಯ ನಾಗರಿಕರಾದ ಮಾದಪ್ಪ ಅವರು ತಮ್ಮ ಸ್ವಾತಂತ್ರ್ಯ ಪೂರ್ವ ದಿನಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ, 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ತಮ್ಮ ಅನುಭವ ಹಂಚಿಕೊಂಡರು.

 

ಹಿರಿಯ ನಾಗರಿಕರು ಒಂದೆಡೆ ಸೇರಿ ಹಲವು ಸಮಸ್ಯೆಗಳು, ಬೇಡಿಕೆಗಳು ಹಾಗೂ ಪರಿಹಾರ ಮಾರ್ಗೋಪಾಯ ಮತ್ತಿತರ ಚರ್ಚೆ ನಡೆಸಲು ಹಿರಿಯರಿಗಾಗಿ ನಿವೇಶನ ಅಗತ್ಯವಿದ್ದು, ನಿವೇಶನ ಒದಗಿಸಿ ‘ಹಿರಿಯ ನಾಗರಿಕರ ಭವನ’ ನಿರ್ಮಾಣಕ್ಕೆ ಅವಕಾಶ ಮಾಡಬೇಕಿದೆ ಎಂದು ಹಿರಿಯರಾದ ಮಾದಪ್ಪ ಅವರು ಮನವಿ ಮಾಡಿದರು.

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಸಂಪತ್‍ಕುಮಾರ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ವೇದಿಕೆಯ ಸದಸ್ಯರು ಇತರರು ಹಾಜರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

13 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

3 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago