Advertisement
ಸುದ್ದಿಗಳು

ಹಿರಿಯ ನಾಗರಿಕರ ಕ್ರೀಡಾಕೂಟ: ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆ

Share

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಸಲಹೆ ಮಾಡಿದ್ದಾರೆ.

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕ ದಿನಾಚರಣೆ ಪ್ರಯುಕ್ತ ಗುರುವಾರ ನಗರದ ಗಾಂಧಿ ಮೈದಾನದಲ್ಲಿ ನಡೆದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜೀವನವು ನಿಂತ ನೀರಾಗಬಾರದು, ಚಟುವಟಿಕೆಯಿಂದ ಕೂಡಿರಬೇಕು. ಹಿರಿಯರಲ್ಲಿ ಲವಲವಿಕೆ ಇದ್ದರೆ ಹೆಚ್ಚು ಸಂತಸ ಸಿಗುತ್ತದೆ. ಹಿರಿಯರು ತಮ್ಮ ಅನುಭವನ್ನು ಮನೆಯಲ್ಲಿರುವ ಕಿರಿಯರಿಗೆ ತಿಳಿಸಿಕೊಡಬೇಕು. ಇದರಿಂದ ಕಿರಿಯರಲ್ಲಿ ಜೀವನದ ಒಳಗುಟ್ಟು ಅರ್ಥವಾಗುತ್ತದೆ. ಜೊತೆಗೆ ಹಿರಿಯರೊಬ್ಬರು ಮನೆಯಲ್ಲಿದ್ದರೆ ಶ್ರೇಯಸ್ಸು ಹೆಚ್ಚುತ್ತದೆ ಎಂದು ಜಿಲ್ಲಾ ಕಾನೂನು ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ನುಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ ಅವರು ಮಾತನಾಡಿ ಹಿರಿಯ ನಾಗರಿಕರು ತುಂಬಾ ಚಟುವಟಿಕೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಹಿರಿಯ ನಾಗರಿಕರು ಸಮಾಜಕ್ಕೆ ಉತ್ತಮ ಮೌಲ್ಯ ನೀಡುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಿರಿಯರಿಗಾಗಿ ಹಗಲು ಯೋಗ ಕ್ಷೇಮ ಕೇಂದ್ರ ತೆರೆಯಲಾಗಿದೆ ಎಂದರು.

ಹಿರಿಯ ನಾಗರಿಕರಾದ ಮಾದಪ್ಪ ಅವರು ತಮ್ಮ ಸ್ವಾತಂತ್ರ್ಯ ಪೂರ್ವ ದಿನಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ, 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ತಮ್ಮ ಅನುಭವ ಹಂಚಿಕೊಂಡರು.

 

ಹಿರಿಯ ನಾಗರಿಕರು ಒಂದೆಡೆ ಸೇರಿ ಹಲವು ಸಮಸ್ಯೆಗಳು, ಬೇಡಿಕೆಗಳು ಹಾಗೂ ಪರಿಹಾರ ಮಾರ್ಗೋಪಾಯ ಮತ್ತಿತರ ಚರ್ಚೆ ನಡೆಸಲು ಹಿರಿಯರಿಗಾಗಿ ನಿವೇಶನ ಅಗತ್ಯವಿದ್ದು, ನಿವೇಶನ ಒದಗಿಸಿ ‘ಹಿರಿಯ ನಾಗರಿಕರ ಭವನ’ ನಿರ್ಮಾಣಕ್ಕೆ ಅವಕಾಶ ಮಾಡಬೇಕಿದೆ ಎಂದು ಹಿರಿಯರಾದ ಮಾದಪ್ಪ ಅವರು ಮನವಿ ಮಾಡಿದರು.

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಸಂಪತ್‍ಕುಮಾರ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ವೇದಿಕೆಯ ಸದಸ್ಯರು ಇತರರು ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರ ಸ್ನೇಹಿ ಗೌರಿ-ಗಣೇಶ ಹಬ್ಬ : ಮಂಗಳೂರು ಮಹಾನಗರಪಾಲಿಕೆ ಸೂಚನೆ

2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…

12 hours ago

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

20 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

1 day ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

1 day ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

1 day ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

1 day ago