Advertisement
ಸುದ್ದಿಗಳು

ಹಿರಿಯ ನಾಗರಿಕರ ಕ್ರೀಡಾಕೂಟ: ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆ

Share

ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಹಿರಿಯರ ಕಡೆಗಣನೆ ಹೆಚ್ಚಾಗುತ್ತಿರುವುದು ಬೇಸರದ ಬೆಳವಣಿಗೆ. ಹಿರಿಯರನ್ನು ಕಡೆಗಣಿಸದೆ ಗೌರವಿಸುವಂತಾಗಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಹಿರಿಯ ನಾಗರಿಕರ ಕ್ರೀಡಾಕೂಟ : ಹಿರಿಯರನ್ನು ಕಡೆಗಣಿಸದೆ ಗೌರವಿಸಿ : ಹಿರಿಯ ನ್ಯಾಯಾಧೀಶೆ ನೂರುನ್ನಿಸ ಸಲಹೆಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಸಲಹೆ ಮಾಡಿದ್ದಾರೆ.

Advertisement
Advertisement

Advertisement

 

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇವರ ಸಂಯುಕ್ತಾಶ್ರಯದಲ್ಲಿ ಹಿರಿಯ ನಾಗರಿಕ ದಿನಾಚರಣೆ ಪ್ರಯುಕ್ತ ಗುರುವಾರ ನಗರದ ಗಾಂಧಿ ಮೈದಾನದಲ್ಲಿ ನಡೆದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕತಿಕ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

Advertisement

ಜೀವನವು ನಿಂತ ನೀರಾಗಬಾರದು, ಚಟುವಟಿಕೆಯಿಂದ ಕೂಡಿರಬೇಕು. ಹಿರಿಯರಲ್ಲಿ ಲವಲವಿಕೆ ಇದ್ದರೆ ಹೆಚ್ಚು ಸಂತಸ ಸಿಗುತ್ತದೆ. ಹಿರಿಯರು ತಮ್ಮ ಅನುಭವನ್ನು ಮನೆಯಲ್ಲಿರುವ ಕಿರಿಯರಿಗೆ ತಿಳಿಸಿಕೊಡಬೇಕು. ಇದರಿಂದ ಕಿರಿಯರಲ್ಲಿ ಜೀವನದ ಒಳಗುಟ್ಟು ಅರ್ಥವಾಗುತ್ತದೆ. ಜೊತೆಗೆ ಹಿರಿಯರೊಬ್ಬರು ಮನೆಯಲ್ಲಿದ್ದರೆ ಶ್ರೇಯಸ್ಸು ಹೆಚ್ಚುತ್ತದೆ ಎಂದು ಜಿಲ್ಲಾ ಕಾನೂನು ಜಿಲ್ಲಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ನುಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ರಾಧಾ ಅವರು ಮಾತನಾಡಿ ಹಿರಿಯ ನಾಗರಿಕರು ತುಂಬಾ ಚಟುವಟಿಕೆಯಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿರುವುದು ಸಂತಸ ತಂದಿದೆ. ಹಿರಿಯ ನಾಗರಿಕರು ಸಮಾಜಕ್ಕೆ ಉತ್ತಮ ಮೌಲ್ಯ ನೀಡುತ್ತಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಹಿರಿಯರಿಗಾಗಿ ಹಗಲು ಯೋಗ ಕ್ಷೇಮ ಕೇಂದ್ರ ತೆರೆಯಲಾಗಿದೆ ಎಂದರು.

Advertisement

ಹಿರಿಯ ನಾಗರಿಕರಾದ ಮಾದಪ್ಪ ಅವರು ತಮ್ಮ ಸ್ವಾತಂತ್ರ್ಯ ಪೂರ್ವ ದಿನಗಳಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ, 1942 ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ ತಮ್ಮ ಅನುಭವ ಹಂಚಿಕೊಂಡರು.

Advertisement

 

ಹಿರಿಯ ನಾಗರಿಕರು ಒಂದೆಡೆ ಸೇರಿ ಹಲವು ಸಮಸ್ಯೆಗಳು, ಬೇಡಿಕೆಗಳು ಹಾಗೂ ಪರಿಹಾರ ಮಾರ್ಗೋಪಾಯ ಮತ್ತಿತರ ಚರ್ಚೆ ನಡೆಸಲು ಹಿರಿಯರಿಗಾಗಿ ನಿವೇಶನ ಅಗತ್ಯವಿದ್ದು, ನಿವೇಶನ ಒದಗಿಸಿ ‘ಹಿರಿಯ ನಾಗರಿಕರ ಭವನ’ ನಿರ್ಮಾಣಕ್ಕೆ ಅವಕಾಶ ಮಾಡಬೇಕಿದೆ ಎಂದು ಹಿರಿಯರಾದ ಮಾದಪ್ಪ ಅವರು ಮನವಿ ಮಾಡಿದರು.

Advertisement

ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ ಇಲಾಖೆಯ ಅಧಿಕಾರಿ ಸಂಪತ್‍ಕುಮಾರ್ ಅವರು ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ವೇದಿಕೆಯ ಸದಸ್ಯರು ಇತರರು ಹಾಜರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಾಜಕ್ಕೆ ಸೇವೆ ಮಾಡುವುದು ಎಂದರೆ ಹಲವು ಆಯಾಮಗಳಿವೆ | ಹವಾಮಾನ ಹೇಳುವುದೂ ಒಂದು ಸೇವೆ |

ಸಮಾಜಕ್ಕೆ ಸೇವೆ ಮಾಡೋದು ಅಂದರೆ ಅದಕ್ಕೆ ಹಲವು ಆಯಾಮಗಳಿವೆ. ನಿಮ್ಮಲ್ಲಿರುವ ಜ್ನಾನವನ್ನು ಜನರಿಗೆ…

1 hour ago

ಮುಳಿಯ ಚಿನ್ನೋತ್ಸವ | ಸ್ಪೆಷಲ್ ರುದ್ರಾಕ್ಷಿ ಕಲೆಕ್ಷನ್ ಅನಾವರಣ

ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಣ್ಣ ಸಣ್ಣ ರುದ್ರಾಕ್ಷಿಯಿಂದ ಕೈ ಬಳೆ, ಉಂಗುರ, ಮಾಲೆಯಾಗಿ ಸಿದ್ದಗೊಂಡ…

2 hours ago

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

18 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

19 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

19 hours ago