ನವದೆಹಲಿ: ಮಾಜಿ ಸಚಿವ, ಹಿರಿಯ ನ್ಯಾಯವಾದಿ ರಾಮ್ ಜೇಠ್ಮಲಾನಿ ಭಾನುವಾರ ಬೆಳಗ್ಗೆ ನವದೆಹಲಿಯ ನಿವಾಸದಲ್ಲಿ ವಿಧಿವಶರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಅವರು ಬಳಲುತ್ತಿದ್ದರು.
ಕೇಂದ್ರದ ಕಾನೂನು ಸಚಿವರಾಗಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ರಾಮ್ ಜೇಠ್ಮಾಲಾನಿ ಕೆಲಸ ಮಾಡಿದ್ದರು. ಮುಂಬೈನಿಂದ ಬಿಜೆಪಿಯಿಂದ ಅವರು 6 ಮತ್ತು 7ನೇ ಲೋಕಸಭೆಗೆ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ದೇಶದ ಹಲವಾರು ಮಹತ್ವದ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ ಸೇರಿದಂತೆ ದೇಶದ ವಿವಿಧ ನ್ಯಾಯಾಲಯಗಳಲ್ಲಿ ವಾದ ಮಂಡನೆ ಮಾಡಿದ್ದರು. ಹರ್ಷಾದ್ ಮೆಹ್ತಾ ಹಗರಣ, ನರಸಿಂಹರಾವ್ ಲಂಚ ಪ್ರಕರಣದಲ್ಲಿ ರಾಮ್ ಜೇಠ್ಮಲಾನಿ ವಾದ ಮಂಡನೆ ಮಾಡಿದ್ದಾರೆ.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…