ಅನುಕ್ರಮ

*ಹುಚ್ಚನು ನಾನಲ್ಲ…*

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಹುಟ್ಟಿದಾಗ ಹುಚ್ಚನು ನಾನಲ್ಲ..
ನನ್ನಂತ ಸುಖಿ ಬೇರಾರು ಇರಲಿಲ್ಲ..
ಕಣ್ಣಿಗೆ ಕಂಡದ್ದನ್ನೇ ಸತ್ಯ ಅಂದುಕೊಂಡೆ ನಾನು
ಸುಖವೂ ಹೋಗಿ ದುಃಖ ಬಂತು ಮೋಸ ಹೋದೆ ನಾನು ||1||
ಜನರಾರು ಸೇರಿಸಲಿಲ್ಲ ಅವರ ಹತ್ತಿರ ನನ್ನನು
ಬೀದಿಯಲ್ಲಿ ಹುಚ್ಚನಾಗಿ ಅಲೆದಾಡಿದೆ ನಾನು
ನಾಯಿತಿಂದುಳಿದ ಆಹಾರವೇ ಮೃಷ್ಟಾನ್ನವೆಂದುಕೊಂಡೆ
ಹರಕಲು‌‌ಗೋಣಿಯಿಂದ ಮಾನ ಮುಚ್ಚಿಕೊಂಡೆ ||2||
ಹುಟ್ಟುತ್ತಾ ನಾನು ಹುಚ್ಚನಲ್ಲ,ಜನ ನನ್ನ ಹುಚ್ಚ ಅಂದ್ರು
ನನ್ನವರೇ ನನ್ನ ಬೀದಿಗಟ್ಟಿ, ಇದೇ ನಿನ್ನ ಜಾಗ ಅಂದ್ರು
ಪುಟಾಣಿ ಮಕ್ಕಳು‌‌ ನನ್ನ ನೋಡಿ ಕಲ್ಲು ಹೊಡೆದು ಬಿಟ್ರು
ಹಣೇಲಿ ಸುರಿದ ರಕ್ತ ನೋಡಿ,ಜನ ಕೇಕೇ ಹಾಕಿ ನಕ್ರು ||3||
ಹುಟ್ಟುತ್ತಾ ನಾನು ಹುಚ್ಚನಲ್ಲ,ನಿಮ್ಮಂತೆ ನಾನಿದ್ದೆ ಅಂದೆ
ಯಾರಿಗೂ ನನ್ನ ಮಾತು ಕೇಳಲೇ ಇಲ್ಲ
ಧಾರಕಾರ ಸುರಿದ  ಮಳೆಯಲಿ ಕಣ್ಣೀರು ಕೂಡಿ ಹೋಯ್ತು
ಒಂದಿಬ್ಬರು ಸಾಂತ್ವಾನ ಕೇಂದ್ರ ಸೇರಿಸಿ ಬಿಟ್ರು ||4||
ಹುಚ್ಚನಾದ ನಾನು ಮತ್ತೆ ಎಲ್ಲರಂತಾಗಿ ಬಿಟ್ಟೆ
ಜನ ಮತ್ತೆ ನನ್ನ ಸೇರಿಸ್ಕೋತಾರೆ ಅಂದುಕೊಂಡು ಬಿಟ್ಟೆ
ಎಲ್ರೂ ಮತ್ತೆ ಹುಚ್ಚ ಎಂದು ಕರೆದು ಬಿಟ್ರು
ಹುಚ್ಚ ಅನ್ನೋ ಹೆಸರೇ ನನಗೆ ಖಾಯಂ ಆಗೋಯ್ತು… ||5||
‌‌
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2…

12 hours ago

ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಪ್ರಾದೇಶಿಕ ಒಪ್ಪಂದಕ್ಕೆ ಬಲಿಯಾಯಿತೇ ಕಾಳು ಮೆಣಸು..?

ಸಾಮನ್ಯವಾಗಿ ಒಂದು ಉತ್ಪನ್ನದ ಉತ್ಪಾದನೆ ಕುಸಿದಾಗ ಅದರ ಬೆಲೆ ಏರಿಕೆ ಆಗುವುದು ಸಹಜ.ಇಲ್ಲಿ…

13 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ…

20 hours ago

ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಹಲವು ಕಡೆ…

20 hours ago