Advertisement
ಅಂಕಣ

*ಹುಚ್ಚನು ನಾನಲ್ಲ…*

Share
ಹುಟ್ಟಿದಾಗ ಹುಚ್ಚನು ನಾನಲ್ಲ..
ನನ್ನಂತ ಸುಖಿ ಬೇರಾರು ಇರಲಿಲ್ಲ..
ಕಣ್ಣಿಗೆ ಕಂಡದ್ದನ್ನೇ ಸತ್ಯ ಅಂದುಕೊಂಡೆ ನಾನು
ಸುಖವೂ ಹೋಗಿ ದುಃಖ ಬಂತು ಮೋಸ ಹೋದೆ ನಾನು ||1||
ಜನರಾರು ಸೇರಿಸಲಿಲ್ಲ ಅವರ ಹತ್ತಿರ ನನ್ನನು
ಬೀದಿಯಲ್ಲಿ ಹುಚ್ಚನಾಗಿ ಅಲೆದಾಡಿದೆ ನಾನು
ನಾಯಿತಿಂದುಳಿದ ಆಹಾರವೇ ಮೃಷ್ಟಾನ್ನವೆಂದುಕೊಂಡೆ
ಹರಕಲು‌‌ಗೋಣಿಯಿಂದ ಮಾನ ಮುಚ್ಚಿಕೊಂಡೆ ||2||
ಹುಟ್ಟುತ್ತಾ ನಾನು ಹುಚ್ಚನಲ್ಲ,ಜನ ನನ್ನ ಹುಚ್ಚ ಅಂದ್ರು
ನನ್ನವರೇ ನನ್ನ ಬೀದಿಗಟ್ಟಿ, ಇದೇ ನಿನ್ನ ಜಾಗ ಅಂದ್ರು
ಪುಟಾಣಿ ಮಕ್ಕಳು‌‌ ನನ್ನ ನೋಡಿ ಕಲ್ಲು ಹೊಡೆದು ಬಿಟ್ರು
ಹಣೇಲಿ ಸುರಿದ ರಕ್ತ ನೋಡಿ,ಜನ ಕೇಕೇ ಹಾಕಿ ನಕ್ರು ||3||
ಹುಟ್ಟುತ್ತಾ ನಾನು ಹುಚ್ಚನಲ್ಲ,ನಿಮ್ಮಂತೆ ನಾನಿದ್ದೆ ಅಂದೆ
ಯಾರಿಗೂ ನನ್ನ ಮಾತು ಕೇಳಲೇ ಇಲ್ಲ
ಧಾರಕಾರ ಸುರಿದ  ಮಳೆಯಲಿ ಕಣ್ಣೀರು ಕೂಡಿ ಹೋಯ್ತು
ಒಂದಿಬ್ಬರು ಸಾಂತ್ವಾನ ಕೇಂದ್ರ ಸೇರಿಸಿ ಬಿಟ್ರು ||4||
ಹುಚ್ಚನಾದ ನಾನು ಮತ್ತೆ ಎಲ್ಲರಂತಾಗಿ ಬಿಟ್ಟೆ
ಜನ ಮತ್ತೆ ನನ್ನ ಸೇರಿಸ್ಕೋತಾರೆ ಅಂದುಕೊಂಡು ಬಿಟ್ಟೆ
ಎಲ್ರೂ ಮತ್ತೆ ಹುಚ್ಚ ಎಂದು ಕರೆದು ಬಿಟ್ರು
ಹುಚ್ಚ ಅನ್ನೋ ಹೆಸರೇ ನನಗೆ ಖಾಯಂ ಆಗೋಯ್ತು… ||5||
‌‌
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

17 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

18 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago