ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..

September 25, 2019
11:00 AM

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ

Advertisement
Advertisement
Advertisement

(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ)

Advertisement

“.. ಮರಣವೇನು? ಸಾಮಾನ್ಯ. ಹುಟ್ಟಿದವರು ಸಾಯ್ತಾರೆ. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ. ಯುದ್ಧ…. ಯುದ್ಧದಲ್ಲಿ ಸತ್ತವನೂ ಸೋತವನಲ್ಲ. ಯುದ್ಧದಲ್ಲಿ ಬದುಕಿದವನು ಮಾತ್ರ ಗೆದ್ದವನೂ ಅಲ್ಲ. ಹೋರಾಟ…. ಆನುವಂಶಿಕತೆಯಿಂದ ಬಂದದ್ದದು. ರಕ್ತಗತವಾದ ದೇವತೆಗಳಲ್ಲಿ ದ್ವೇಷ. ಇಲ್ಲದಿದ್ದರೆ ‘ಸುರ-ಅಸುರ’ ಎಂಬ ವಿರುದ್ಧವಾದ ಸಂಘರ್ಷಾತ್ಮಕವಾದಂತಹ ಪದ ಹುಟ್ಟುತ್ತಲೇ ಇರಲಿಲ್ಲ. ಅವರಿದ್ದಲ್ಲಿ ನಾವಿಲ್ಲ ಎಂದರ್ಥ….

ಭಾಪುರೇ… ಕುಮಾರನೆಂದು ನಿನ್ನ ಹೆಸರು. ಆಕೃತಿಯೂ ಕುಮಾರನದ್ದು. ಅಯ್ಯಾ…. ಕೌಮಾರ, ಇಷ್ಟು ವಿಜೃಂಭಿಸಿದರೆ ಬಹುಶಃ ಮುಂದಿನದ್ದು ಕಳೆಗುಂದುತ್ತದೋ ಎಂಬ ಸಂದೇಹ ನನಗಿದೆ. ಬಾಲ್ಯ, ಕೌಮಾರ – ಇದು ಮುಂದಿನದ್ದಾದಂತಹ ಜೀವನದ ಯೌವನ, ವಾರ್ಧಕ್ಯಕ್ಕೆ ಪೋಷಕವಾಗಬೇಕು, ಪೂರಕವಾಗಬೇಕು. ಅವಾಗ ಮಾಡಬೇಕಾದ್ದು ಸಂಗ್ರಹ, ನಿಗ್ರಹವಲ್ಲ. ಚಿಂತಿಲ್ಲ. ಎಳೆಯ ವಯಸ್ಸಿನಲ್ಲಿ ನೀನು ಮಾಡಿದಂತಹ ಅದ್ಭುತ ಪರಾಕ್ರಮಗಳನ್ನೆಲ್ಲಾ ಕಂಡಾಗ ನನ್ನ ವಿರೋಧಿ ಸ್ಥಾನದಲ್ಲಿ ನೀನು ನಿಂತರೂ ಕೂಡಾ ವೀರರಸ ಪ್ರಧಾನವಾದಂತಹ ಯಾವುದೇ ಕಥಾನಕವನ್ನು ತಾಳಿ ರೋಮಾಂಚನಗೊಳ್ಳುವ ನನ್ನ ಜಾಯಮಾನದಿಂದ ನಿನ್ನನ್ನು ನಾನು ಮೆಚ್ಚುತ್ತೇನೆ.

Advertisement

ಏನಯ್ಯಾ… ಈ ಮರಣ ಎನ್ನುವುದು ನನ್ನಂತಹ ಜೀವರಿಗೆ ಮಹಾನವಮಿ, ಉತ್ಸವ! ‘ಹೇಗಾದರೂ ಸಾಯಕೂಡದು’ ಎಂಬುದು ನನ್ನ ಹಠ. ನಮ್ಮಂತಹ ಯೋಧರಿಗೆ ಜೀವನವೇ ಒಂದು ಸಂಗ್ರಾಮ. ಭೂಮಿಯಾದ್ದರಿಂದ, ಆ ಸಂಗ್ರಾಮ ಭೂಮಿ ಕೊನೆಯ ಉಸಿರಿನಲ್ಲಿ ಈ ರೀತಿಯ ಹೋರಾಟ ಭೂಮಿಯಾಗಿ, ರಕ್ತದಲ್ಲಿ ವಿರೋಧಿಯ ಆಯುಧದಿಂದ ಗತಪ್ರಾಣನಾದರೆ, ಶಾಸ್ತ್ರ ಹೌದಾಗಿದ್ದರೆ ಯುದ್ಧದಲ್ಲಿ ಸತ್ತವರು ಮರಳಿ ಹುಟ್ಟುವುದಿಲ್ಲ. ಜೈಸಿದರಂತೂ ‘ಇಹ’ ಉಂಟು. ಸತ್ತರೆ ‘ಪರ’ ಮಾತ್ರ. ಇಹ-ಪರ ಎರಡನ್ನೂ ಸಾಧಿಸುವ ಸಾಧನೆ ನನ್ನದು….”

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ

ಇದನ್ನೂ ಓದಿ

ಯಾರಿಗೆ ಧೈರ್ಯ ಉಂಟು ಮಾರಾಯ್ರೆ, ‘ಈ ತುಪ್ಪದ ಭರಣಿಯನ್ನು ಒಲೆಯ ಬುಡದಲ್ಲಿ ಇಡಲು…!’
April 13, 2020
10:23 PM
by: ನಾ.ಕಾರಂತ ಪೆರಾಜೆ
ಕತ್ತಲೆಯ ಕೋಣೆಯಲ್ಲಿದ್ದ ಅಂಧಕಾರಕ್ಕೆ ನೂರು ವರುಷ ಆಯುಸ್ಸು….
November 7, 2019
2:49 PM
by: ನಾ.ಕಾರಂತ ಪೆರಾಜೆ
‘ನಮ್ಮ ಶಿವ ದೇವರು ವಿಷ ಕುಡಿದರೂ ಸಾಯಲಿಲ್ಲ’ ಅಂತ ಭಾವುಕರು ಹೇಳ್ತಾರಲ್ಲ….. ‘ಯಾಕೆ ಶಿವ ಸಾಯಲಿಲ್ಲ’?
October 21, 2019
11:00 AM
by: ನಾ.ಕಾರಂತ ಪೆರಾಜೆ
‘ಕುಮಾರ’ ಶಬ್ದದ ಅರ್ಥವೇನು? ವೇದಾಂತಿಗಳು ಹೇಳುತ್ತಾರೆ……
October 12, 2019
2:33 PM
by: ನಾ.ಕಾರಂತ ಪೆರಾಜೆ

You cannot copy content of this page - Copyright -The Rural Mirror