ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ
(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ)
“.. ಮರಣವೇನು? ಸಾಮಾನ್ಯ. ಹುಟ್ಟಿದವರು ಸಾಯ್ತಾರೆ. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ. ಯುದ್ಧ…. ಯುದ್ಧದಲ್ಲಿ ಸತ್ತವನೂ ಸೋತವನಲ್ಲ. ಯುದ್ಧದಲ್ಲಿ ಬದುಕಿದವನು ಮಾತ್ರ ಗೆದ್ದವನೂ ಅಲ್ಲ. ಹೋರಾಟ…. ಆನುವಂಶಿಕತೆಯಿಂದ ಬಂದದ್ದದು. ರಕ್ತಗತವಾದ ದೇವತೆಗಳಲ್ಲಿ ದ್ವೇಷ. ಇಲ್ಲದಿದ್ದರೆ ‘ಸುರ-ಅಸುರ’ ಎಂಬ ವಿರುದ್ಧವಾದ ಸಂಘರ್ಷಾತ್ಮಕವಾದಂತಹ ಪದ ಹುಟ್ಟುತ್ತಲೇ ಇರಲಿಲ್ಲ. ಅವರಿದ್ದಲ್ಲಿ ನಾವಿಲ್ಲ ಎಂದರ್ಥ….
ಭಾಪುರೇ… ಕುಮಾರನೆಂದು ನಿನ್ನ ಹೆಸರು. ಆಕೃತಿಯೂ ಕುಮಾರನದ್ದು. ಅಯ್ಯಾ…. ಕೌಮಾರ, ಇಷ್ಟು ವಿಜೃಂಭಿಸಿದರೆ ಬಹುಶಃ ಮುಂದಿನದ್ದು ಕಳೆಗುಂದುತ್ತದೋ ಎಂಬ ಸಂದೇಹ ನನಗಿದೆ. ಬಾಲ್ಯ, ಕೌಮಾರ – ಇದು ಮುಂದಿನದ್ದಾದಂತಹ ಜೀವನದ ಯೌವನ, ವಾರ್ಧಕ್ಯಕ್ಕೆ ಪೋಷಕವಾಗಬೇಕು, ಪೂರಕವಾಗಬೇಕು. ಅವಾಗ ಮಾಡಬೇಕಾದ್ದು ಸಂಗ್ರಹ, ನಿಗ್ರಹವಲ್ಲ. ಚಿಂತಿಲ್ಲ. ಎಳೆಯ ವಯಸ್ಸಿನಲ್ಲಿ ನೀನು ಮಾಡಿದಂತಹ ಅದ್ಭುತ ಪರಾಕ್ರಮಗಳನ್ನೆಲ್ಲಾ ಕಂಡಾಗ ನನ್ನ ವಿರೋಧಿ ಸ್ಥಾನದಲ್ಲಿ ನೀನು ನಿಂತರೂ ಕೂಡಾ ವೀರರಸ ಪ್ರಧಾನವಾದಂತಹ ಯಾವುದೇ ಕಥಾನಕವನ್ನು ತಾಳಿ ರೋಮಾಂಚನಗೊಳ್ಳುವ ನನ್ನ ಜಾಯಮಾನದಿಂದ ನಿನ್ನನ್ನು ನಾನು ಮೆಚ್ಚುತ್ತೇನೆ.
ಏನಯ್ಯಾ… ಈ ಮರಣ ಎನ್ನುವುದು ನನ್ನಂತಹ ಜೀವರಿಗೆ ಮಹಾನವಮಿ, ಉತ್ಸವ! ‘ಹೇಗಾದರೂ ಸಾಯಕೂಡದು’ ಎಂಬುದು ನನ್ನ ಹಠ. ನಮ್ಮಂತಹ ಯೋಧರಿಗೆ ಜೀವನವೇ ಒಂದು ಸಂಗ್ರಾಮ. ಭೂಮಿಯಾದ್ದರಿಂದ, ಆ ಸಂಗ್ರಾಮ ಭೂಮಿ ಕೊನೆಯ ಉಸಿರಿನಲ್ಲಿ ಈ ರೀತಿಯ ಹೋರಾಟ ಭೂಮಿಯಾಗಿ, ರಕ್ತದಲ್ಲಿ ವಿರೋಧಿಯ ಆಯುಧದಿಂದ ಗತಪ್ರಾಣನಾದರೆ, ಶಾಸ್ತ್ರ ಹೌದಾಗಿದ್ದರೆ ಯುದ್ಧದಲ್ಲಿ ಸತ್ತವರು ಮರಳಿ ಹುಟ್ಟುವುದಿಲ್ಲ. ಜೈಸಿದರಂತೂ ‘ಇಹ’ ಉಂಟು. ಸತ್ತರೆ ‘ಪರ’ ಮಾತ್ರ. ಇಹ-ಪರ ಎರಡನ್ನೂ ಸಾಧಿಸುವ ಸಾಧನೆ ನನ್ನದು….”
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…