ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ
(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ)
“.. ಮರಣವೇನು? ಸಾಮಾನ್ಯ. ಹುಟ್ಟಿದವರು ಸಾಯ್ತಾರೆ. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ. ಯುದ್ಧ…. ಯುದ್ಧದಲ್ಲಿ ಸತ್ತವನೂ ಸೋತವನಲ್ಲ. ಯುದ್ಧದಲ್ಲಿ ಬದುಕಿದವನು ಮಾತ್ರ ಗೆದ್ದವನೂ ಅಲ್ಲ. ಹೋರಾಟ…. ಆನುವಂಶಿಕತೆಯಿಂದ ಬಂದದ್ದದು. ರಕ್ತಗತವಾದ ದೇವತೆಗಳಲ್ಲಿ ದ್ವೇಷ. ಇಲ್ಲದಿದ್ದರೆ ‘ಸುರ-ಅಸುರ’ ಎಂಬ ವಿರುದ್ಧವಾದ ಸಂಘರ್ಷಾತ್ಮಕವಾದಂತಹ ಪದ ಹುಟ್ಟುತ್ತಲೇ ಇರಲಿಲ್ಲ. ಅವರಿದ್ದಲ್ಲಿ ನಾವಿಲ್ಲ ಎಂದರ್ಥ….
ಭಾಪುರೇ… ಕುಮಾರನೆಂದು ನಿನ್ನ ಹೆಸರು. ಆಕೃತಿಯೂ ಕುಮಾರನದ್ದು. ಅಯ್ಯಾ…. ಕೌಮಾರ, ಇಷ್ಟು ವಿಜೃಂಭಿಸಿದರೆ ಬಹುಶಃ ಮುಂದಿನದ್ದು ಕಳೆಗುಂದುತ್ತದೋ ಎಂಬ ಸಂದೇಹ ನನಗಿದೆ. ಬಾಲ್ಯ, ಕೌಮಾರ – ಇದು ಮುಂದಿನದ್ದಾದಂತಹ ಜೀವನದ ಯೌವನ, ವಾರ್ಧಕ್ಯಕ್ಕೆ ಪೋಷಕವಾಗಬೇಕು, ಪೂರಕವಾಗಬೇಕು. ಅವಾಗ ಮಾಡಬೇಕಾದ್ದು ಸಂಗ್ರಹ, ನಿಗ್ರಹವಲ್ಲ. ಚಿಂತಿಲ್ಲ. ಎಳೆಯ ವಯಸ್ಸಿನಲ್ಲಿ ನೀನು ಮಾಡಿದಂತಹ ಅದ್ಭುತ ಪರಾಕ್ರಮಗಳನ್ನೆಲ್ಲಾ ಕಂಡಾಗ ನನ್ನ ವಿರೋಧಿ ಸ್ಥಾನದಲ್ಲಿ ನೀನು ನಿಂತರೂ ಕೂಡಾ ವೀರರಸ ಪ್ರಧಾನವಾದಂತಹ ಯಾವುದೇ ಕಥಾನಕವನ್ನು ತಾಳಿ ರೋಮಾಂಚನಗೊಳ್ಳುವ ನನ್ನ ಜಾಯಮಾನದಿಂದ ನಿನ್ನನ್ನು ನಾನು ಮೆಚ್ಚುತ್ತೇನೆ.
ಏನಯ್ಯಾ… ಈ ಮರಣ ಎನ್ನುವುದು ನನ್ನಂತಹ ಜೀವರಿಗೆ ಮಹಾನವಮಿ, ಉತ್ಸವ! ‘ಹೇಗಾದರೂ ಸಾಯಕೂಡದು’ ಎಂಬುದು ನನ್ನ ಹಠ. ನಮ್ಮಂತಹ ಯೋಧರಿಗೆ ಜೀವನವೇ ಒಂದು ಸಂಗ್ರಾಮ. ಭೂಮಿಯಾದ್ದರಿಂದ, ಆ ಸಂಗ್ರಾಮ ಭೂಮಿ ಕೊನೆಯ ಉಸಿರಿನಲ್ಲಿ ಈ ರೀತಿಯ ಹೋರಾಟ ಭೂಮಿಯಾಗಿ, ರಕ್ತದಲ್ಲಿ ವಿರೋಧಿಯ ಆಯುಧದಿಂದ ಗತಪ್ರಾಣನಾದರೆ, ಶಾಸ್ತ್ರ ಹೌದಾಗಿದ್ದರೆ ಯುದ್ಧದಲ್ಲಿ ಸತ್ತವರು ಮರಳಿ ಹುಟ್ಟುವುದಿಲ್ಲ. ಜೈಸಿದರಂತೂ ‘ಇಹ’ ಉಂಟು. ಸತ್ತರೆ ‘ಪರ’ ಮಾತ್ರ. ಇಹ-ಪರ ಎರಡನ್ನೂ ಸಾಧಿಸುವ ಸಾಧನೆ ನನ್ನದು….”
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…