Advertisement
ಯಕ್ಷಗಾನ : ಮಾತು-ಮಸೆತ

ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ

Advertisement
Advertisement

(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ)

Advertisement

“.. ಮರಣವೇನು? ಸಾಮಾನ್ಯ. ಹುಟ್ಟಿದವರು ಸಾಯ್ತಾರೆ. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ. ಯುದ್ಧ…. ಯುದ್ಧದಲ್ಲಿ ಸತ್ತವನೂ ಸೋತವನಲ್ಲ. ಯುದ್ಧದಲ್ಲಿ ಬದುಕಿದವನು ಮಾತ್ರ ಗೆದ್ದವನೂ ಅಲ್ಲ. ಹೋರಾಟ…. ಆನುವಂಶಿಕತೆಯಿಂದ ಬಂದದ್ದದು. ರಕ್ತಗತವಾದ ದೇವತೆಗಳಲ್ಲಿ ದ್ವೇಷ. ಇಲ್ಲದಿದ್ದರೆ ‘ಸುರ-ಅಸುರ’ ಎಂಬ ವಿರುದ್ಧವಾದ ಸಂಘರ್ಷಾತ್ಮಕವಾದಂತಹ ಪದ ಹುಟ್ಟುತ್ತಲೇ ಇರಲಿಲ್ಲ. ಅವರಿದ್ದಲ್ಲಿ ನಾವಿಲ್ಲ ಎಂದರ್ಥ….

ಭಾಪುರೇ… ಕುಮಾರನೆಂದು ನಿನ್ನ ಹೆಸರು. ಆಕೃತಿಯೂ ಕುಮಾರನದ್ದು. ಅಯ್ಯಾ…. ಕೌಮಾರ, ಇಷ್ಟು ವಿಜೃಂಭಿಸಿದರೆ ಬಹುಶಃ ಮುಂದಿನದ್ದು ಕಳೆಗುಂದುತ್ತದೋ ಎಂಬ ಸಂದೇಹ ನನಗಿದೆ. ಬಾಲ್ಯ, ಕೌಮಾರ – ಇದು ಮುಂದಿನದ್ದಾದಂತಹ ಜೀವನದ ಯೌವನ, ವಾರ್ಧಕ್ಯಕ್ಕೆ ಪೋಷಕವಾಗಬೇಕು, ಪೂರಕವಾಗಬೇಕು. ಅವಾಗ ಮಾಡಬೇಕಾದ್ದು ಸಂಗ್ರಹ, ನಿಗ್ರಹವಲ್ಲ. ಚಿಂತಿಲ್ಲ. ಎಳೆಯ ವಯಸ್ಸಿನಲ್ಲಿ ನೀನು ಮಾಡಿದಂತಹ ಅದ್ಭುತ ಪರಾಕ್ರಮಗಳನ್ನೆಲ್ಲಾ ಕಂಡಾಗ ನನ್ನ ವಿರೋಧಿ ಸ್ಥಾನದಲ್ಲಿ ನೀನು ನಿಂತರೂ ಕೂಡಾ ವೀರರಸ ಪ್ರಧಾನವಾದಂತಹ ಯಾವುದೇ ಕಥಾನಕವನ್ನು ತಾಳಿ ರೋಮಾಂಚನಗೊಳ್ಳುವ ನನ್ನ ಜಾಯಮಾನದಿಂದ ನಿನ್ನನ್ನು ನಾನು ಮೆಚ್ಚುತ್ತೇನೆ.

Advertisement

ಏನಯ್ಯಾ… ಈ ಮರಣ ಎನ್ನುವುದು ನನ್ನಂತಹ ಜೀವರಿಗೆ ಮಹಾನವಮಿ, ಉತ್ಸವ! ‘ಹೇಗಾದರೂ ಸಾಯಕೂಡದು’ ಎಂಬುದು ನನ್ನ ಹಠ. ನಮ್ಮಂತಹ ಯೋಧರಿಗೆ ಜೀವನವೇ ಒಂದು ಸಂಗ್ರಾಮ. ಭೂಮಿಯಾದ್ದರಿಂದ, ಆ ಸಂಗ್ರಾಮ ಭೂಮಿ ಕೊನೆಯ ಉಸಿರಿನಲ್ಲಿ ಈ ರೀತಿಯ ಹೋರಾಟ ಭೂಮಿಯಾಗಿ, ರಕ್ತದಲ್ಲಿ ವಿರೋಧಿಯ ಆಯುಧದಿಂದ ಗತಪ್ರಾಣನಾದರೆ, ಶಾಸ್ತ್ರ ಹೌದಾಗಿದ್ದರೆ ಯುದ್ಧದಲ್ಲಿ ಸತ್ತವರು ಮರಳಿ ಹುಟ್ಟುವುದಿಲ್ಲ. ಜೈಸಿದರಂತೂ ‘ಇಹ’ ಉಂಟು. ಸತ್ತರೆ ‘ಪರ’ ಮಾತ್ರ. ಇಹ-ಪರ ಎರಡನ್ನೂ ಸಾಧಿಸುವ ಸಾಧನೆ ನನ್ನದು….”

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ

Published by
ನಾ.ಕಾರಂತ ಪೆರಾಜೆ

Recent Posts

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

3 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

3 hours ago

ತಾಪಮಾನದಿಂದ ಅಡಿಕೆ ಕೃಷಿ ರಕ್ಷಣೆ | ಗೋವು ಹಾಗೂ ಗೋಉತ್ಪನ್ನ ಪರಿಣಾಮಕಾರಿ ಹೇಗೆ..? | ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಏಕೆ ಬೇಕು ?

ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…

3 hours ago