Advertisement
ಯಕ್ಷಗಾನ : ಮಾತು-ಮಸೆತ

ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ

(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ)

“.. ಮರಣವೇನು? ಸಾಮಾನ್ಯ. ಹುಟ್ಟಿದವರು ಸಾಯ್ತಾರೆ. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ. ಯುದ್ಧ…. ಯುದ್ಧದಲ್ಲಿ ಸತ್ತವನೂ ಸೋತವನಲ್ಲ. ಯುದ್ಧದಲ್ಲಿ ಬದುಕಿದವನು ಮಾತ್ರ ಗೆದ್ದವನೂ ಅಲ್ಲ. ಹೋರಾಟ…. ಆನುವಂಶಿಕತೆಯಿಂದ ಬಂದದ್ದದು. ರಕ್ತಗತವಾದ ದೇವತೆಗಳಲ್ಲಿ ದ್ವೇಷ. ಇಲ್ಲದಿದ್ದರೆ ‘ಸುರ-ಅಸುರ’ ಎಂಬ ವಿರುದ್ಧವಾದ ಸಂಘರ್ಷಾತ್ಮಕವಾದಂತಹ ಪದ ಹುಟ್ಟುತ್ತಲೇ ಇರಲಿಲ್ಲ. ಅವರಿದ್ದಲ್ಲಿ ನಾವಿಲ್ಲ ಎಂದರ್ಥ….

ಭಾಪುರೇ… ಕುಮಾರನೆಂದು ನಿನ್ನ ಹೆಸರು. ಆಕೃತಿಯೂ ಕುಮಾರನದ್ದು. ಅಯ್ಯಾ…. ಕೌಮಾರ, ಇಷ್ಟು ವಿಜೃಂಭಿಸಿದರೆ ಬಹುಶಃ ಮುಂದಿನದ್ದು ಕಳೆಗುಂದುತ್ತದೋ ಎಂಬ ಸಂದೇಹ ನನಗಿದೆ. ಬಾಲ್ಯ, ಕೌಮಾರ – ಇದು ಮುಂದಿನದ್ದಾದಂತಹ ಜೀವನದ ಯೌವನ, ವಾರ್ಧಕ್ಯಕ್ಕೆ ಪೋಷಕವಾಗಬೇಕು, ಪೂರಕವಾಗಬೇಕು. ಅವಾಗ ಮಾಡಬೇಕಾದ್ದು ಸಂಗ್ರಹ, ನಿಗ್ರಹವಲ್ಲ. ಚಿಂತಿಲ್ಲ. ಎಳೆಯ ವಯಸ್ಸಿನಲ್ಲಿ ನೀನು ಮಾಡಿದಂತಹ ಅದ್ಭುತ ಪರಾಕ್ರಮಗಳನ್ನೆಲ್ಲಾ ಕಂಡಾಗ ನನ್ನ ವಿರೋಧಿ ಸ್ಥಾನದಲ್ಲಿ ನೀನು ನಿಂತರೂ ಕೂಡಾ ವೀರರಸ ಪ್ರಧಾನವಾದಂತಹ ಯಾವುದೇ ಕಥಾನಕವನ್ನು ತಾಳಿ ರೋಮಾಂಚನಗೊಳ್ಳುವ ನನ್ನ ಜಾಯಮಾನದಿಂದ ನಿನ್ನನ್ನು ನಾನು ಮೆಚ್ಚುತ್ತೇನೆ.

ಏನಯ್ಯಾ… ಈ ಮರಣ ಎನ್ನುವುದು ನನ್ನಂತಹ ಜೀವರಿಗೆ ಮಹಾನವಮಿ, ಉತ್ಸವ! ‘ಹೇಗಾದರೂ ಸಾಯಕೂಡದು’ ಎಂಬುದು ನನ್ನ ಹಠ. ನಮ್ಮಂತಹ ಯೋಧರಿಗೆ ಜೀವನವೇ ಒಂದು ಸಂಗ್ರಾಮ. ಭೂಮಿಯಾದ್ದರಿಂದ, ಆ ಸಂಗ್ರಾಮ ಭೂಮಿ ಕೊನೆಯ ಉಸಿರಿನಲ್ಲಿ ಈ ರೀತಿಯ ಹೋರಾಟ ಭೂಮಿಯಾಗಿ, ರಕ್ತದಲ್ಲಿ ವಿರೋಧಿಯ ಆಯುಧದಿಂದ ಗತಪ್ರಾಣನಾದರೆ, ಶಾಸ್ತ್ರ ಹೌದಾಗಿದ್ದರೆ ಯುದ್ಧದಲ್ಲಿ ಸತ್ತವರು ಮರಳಿ ಹುಟ್ಟುವುದಿಲ್ಲ. ಜೈಸಿದರಂತೂ ‘ಇಹ’ ಉಂಟು. ಸತ್ತರೆ ‘ಪರ’ ಮಾತ್ರ. ಇಹ-ಪರ ಎರಡನ್ನೂ ಸಾಧಿಸುವ ಸಾಧನೆ ನನ್ನದು….”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 hour ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

20 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

2 days ago