Advertisement
ಯಕ್ಷಗಾನ : ಮಾತು-ಮಸೆತ

ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ

Advertisement

(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ)

“.. ಮರಣವೇನು? ಸಾಮಾನ್ಯ. ಹುಟ್ಟಿದವರು ಸಾಯ್ತಾರೆ. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ. ಯುದ್ಧ…. ಯುದ್ಧದಲ್ಲಿ ಸತ್ತವನೂ ಸೋತವನಲ್ಲ. ಯುದ್ಧದಲ್ಲಿ ಬದುಕಿದವನು ಮಾತ್ರ ಗೆದ್ದವನೂ ಅಲ್ಲ. ಹೋರಾಟ…. ಆನುವಂಶಿಕತೆಯಿಂದ ಬಂದದ್ದದು. ರಕ್ತಗತವಾದ ದೇವತೆಗಳಲ್ಲಿ ದ್ವೇಷ. ಇಲ್ಲದಿದ್ದರೆ ‘ಸುರ-ಅಸುರ’ ಎಂಬ ವಿರುದ್ಧವಾದ ಸಂಘರ್ಷಾತ್ಮಕವಾದಂತಹ ಪದ ಹುಟ್ಟುತ್ತಲೇ ಇರಲಿಲ್ಲ. ಅವರಿದ್ದಲ್ಲಿ ನಾವಿಲ್ಲ ಎಂದರ್ಥ….

ಭಾಪುರೇ… ಕುಮಾರನೆಂದು ನಿನ್ನ ಹೆಸರು. ಆಕೃತಿಯೂ ಕುಮಾರನದ್ದು. ಅಯ್ಯಾ…. ಕೌಮಾರ, ಇಷ್ಟು ವಿಜೃಂಭಿಸಿದರೆ ಬಹುಶಃ ಮುಂದಿನದ್ದು ಕಳೆಗುಂದುತ್ತದೋ ಎಂಬ ಸಂದೇಹ ನನಗಿದೆ. ಬಾಲ್ಯ, ಕೌಮಾರ – ಇದು ಮುಂದಿನದ್ದಾದಂತಹ ಜೀವನದ ಯೌವನ, ವಾರ್ಧಕ್ಯಕ್ಕೆ ಪೋಷಕವಾಗಬೇಕು, ಪೂರಕವಾಗಬೇಕು. ಅವಾಗ ಮಾಡಬೇಕಾದ್ದು ಸಂಗ್ರಹ, ನಿಗ್ರಹವಲ್ಲ. ಚಿಂತಿಲ್ಲ. ಎಳೆಯ ವಯಸ್ಸಿನಲ್ಲಿ ನೀನು ಮಾಡಿದಂತಹ ಅದ್ಭುತ ಪರಾಕ್ರಮಗಳನ್ನೆಲ್ಲಾ ಕಂಡಾಗ ನನ್ನ ವಿರೋಧಿ ಸ್ಥಾನದಲ್ಲಿ ನೀನು ನಿಂತರೂ ಕೂಡಾ ವೀರರಸ ಪ್ರಧಾನವಾದಂತಹ ಯಾವುದೇ ಕಥಾನಕವನ್ನು ತಾಳಿ ರೋಮಾಂಚನಗೊಳ್ಳುವ ನನ್ನ ಜಾಯಮಾನದಿಂದ ನಿನ್ನನ್ನು ನಾನು ಮೆಚ್ಚುತ್ತೇನೆ.

ಏನಯ್ಯಾ… ಈ ಮರಣ ಎನ್ನುವುದು ನನ್ನಂತಹ ಜೀವರಿಗೆ ಮಹಾನವಮಿ, ಉತ್ಸವ! ‘ಹೇಗಾದರೂ ಸಾಯಕೂಡದು’ ಎಂಬುದು ನನ್ನ ಹಠ. ನಮ್ಮಂತಹ ಯೋಧರಿಗೆ ಜೀವನವೇ ಒಂದು ಸಂಗ್ರಾಮ. ಭೂಮಿಯಾದ್ದರಿಂದ, ಆ ಸಂಗ್ರಾಮ ಭೂಮಿ ಕೊನೆಯ ಉಸಿರಿನಲ್ಲಿ ಈ ರೀತಿಯ ಹೋರಾಟ ಭೂಮಿಯಾಗಿ, ರಕ್ತದಲ್ಲಿ ವಿರೋಧಿಯ ಆಯುಧದಿಂದ ಗತಪ್ರಾಣನಾದರೆ, ಶಾಸ್ತ್ರ ಹೌದಾಗಿದ್ದರೆ ಯುದ್ಧದಲ್ಲಿ ಸತ್ತವರು ಮರಳಿ ಹುಟ್ಟುವುದಿಲ್ಲ. ಜೈಸಿದರಂತೂ ‘ಇಹ’ ಉಂಟು. ಸತ್ತರೆ ‘ಪರ’ ಮಾತ್ರ. ಇಹ-ಪರ ಎರಡನ್ನೂ ಸಾಧಿಸುವ ಸಾಧನೆ ನನ್ನದು….”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

13 hours ago

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

20 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

20 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

2 days ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

2 days ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

2 days ago