Advertisement
ಯಕ್ಷಗಾನ : ಮಾತು-ಮಸೆತ

ಹುಟ್ಟಿದವರು ಸಾಯ್ತಾರೆ….. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ…..

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶೂರಪದ್ಮ’)
ಪ್ರಸಂಗ : ಕುಮಾರ ವಿಜಯ

(ಸಂದರ್ಭ : ಷಣ್ಮುಖ ಮತ್ತು ಶೂರಪದ್ಮ ಯುದ್ಧದ ಸನ್ನಿವೇಶ)

“.. ಮರಣವೇನು? ಸಾಮಾನ್ಯ. ಹುಟ್ಟಿದವರು ಸಾಯ್ತಾರೆ. ಈ ತತ್ವದಿಂದ ಬದುಕಿದರೆ ಅದು ಬದುಕಾಗುವುದಿಲ್ಲ. ಯುದ್ಧ…. ಯುದ್ಧದಲ್ಲಿ ಸತ್ತವನೂ ಸೋತವನಲ್ಲ. ಯುದ್ಧದಲ್ಲಿ ಬದುಕಿದವನು ಮಾತ್ರ ಗೆದ್ದವನೂ ಅಲ್ಲ. ಹೋರಾಟ…. ಆನುವಂಶಿಕತೆಯಿಂದ ಬಂದದ್ದದು. ರಕ್ತಗತವಾದ ದೇವತೆಗಳಲ್ಲಿ ದ್ವೇಷ. ಇಲ್ಲದಿದ್ದರೆ ‘ಸುರ-ಅಸುರ’ ಎಂಬ ವಿರುದ್ಧವಾದ ಸಂಘರ್ಷಾತ್ಮಕವಾದಂತಹ ಪದ ಹುಟ್ಟುತ್ತಲೇ ಇರಲಿಲ್ಲ. ಅವರಿದ್ದಲ್ಲಿ ನಾವಿಲ್ಲ ಎಂದರ್ಥ….

ಭಾಪುರೇ… ಕುಮಾರನೆಂದು ನಿನ್ನ ಹೆಸರು. ಆಕೃತಿಯೂ ಕುಮಾರನದ್ದು. ಅಯ್ಯಾ…. ಕೌಮಾರ, ಇಷ್ಟು ವಿಜೃಂಭಿಸಿದರೆ ಬಹುಶಃ ಮುಂದಿನದ್ದು ಕಳೆಗುಂದುತ್ತದೋ ಎಂಬ ಸಂದೇಹ ನನಗಿದೆ. ಬಾಲ್ಯ, ಕೌಮಾರ – ಇದು ಮುಂದಿನದ್ದಾದಂತಹ ಜೀವನದ ಯೌವನ, ವಾರ್ಧಕ್ಯಕ್ಕೆ ಪೋಷಕವಾಗಬೇಕು, ಪೂರಕವಾಗಬೇಕು. ಅವಾಗ ಮಾಡಬೇಕಾದ್ದು ಸಂಗ್ರಹ, ನಿಗ್ರಹವಲ್ಲ. ಚಿಂತಿಲ್ಲ. ಎಳೆಯ ವಯಸ್ಸಿನಲ್ಲಿ ನೀನು ಮಾಡಿದಂತಹ ಅದ್ಭುತ ಪರಾಕ್ರಮಗಳನ್ನೆಲ್ಲಾ ಕಂಡಾಗ ನನ್ನ ವಿರೋಧಿ ಸ್ಥಾನದಲ್ಲಿ ನೀನು ನಿಂತರೂ ಕೂಡಾ ವೀರರಸ ಪ್ರಧಾನವಾದಂತಹ ಯಾವುದೇ ಕಥಾನಕವನ್ನು ತಾಳಿ ರೋಮಾಂಚನಗೊಳ್ಳುವ ನನ್ನ ಜಾಯಮಾನದಿಂದ ನಿನ್ನನ್ನು ನಾನು ಮೆಚ್ಚುತ್ತೇನೆ.

ಏನಯ್ಯಾ… ಈ ಮರಣ ಎನ್ನುವುದು ನನ್ನಂತಹ ಜೀವರಿಗೆ ಮಹಾನವಮಿ, ಉತ್ಸವ! ‘ಹೇಗಾದರೂ ಸಾಯಕೂಡದು’ ಎಂಬುದು ನನ್ನ ಹಠ. ನಮ್ಮಂತಹ ಯೋಧರಿಗೆ ಜೀವನವೇ ಒಂದು ಸಂಗ್ರಾಮ. ಭೂಮಿಯಾದ್ದರಿಂದ, ಆ ಸಂಗ್ರಾಮ ಭೂಮಿ ಕೊನೆಯ ಉಸಿರಿನಲ್ಲಿ ಈ ರೀತಿಯ ಹೋರಾಟ ಭೂಮಿಯಾಗಿ, ರಕ್ತದಲ್ಲಿ ವಿರೋಧಿಯ ಆಯುಧದಿಂದ ಗತಪ್ರಾಣನಾದರೆ, ಶಾಸ್ತ್ರ ಹೌದಾಗಿದ್ದರೆ ಯುದ್ಧದಲ್ಲಿ ಸತ್ತವರು ಮರಳಿ ಹುಟ್ಟುವುದಿಲ್ಲ. ಜೈಸಿದರಂತೂ ‘ಇಹ’ ಉಂಟು. ಸತ್ತರೆ ‘ಪರ’ ಮಾತ್ರ. ಇಹ-ಪರ ಎರಡನ್ನೂ ಸಾಧಿಸುವ ಸಾಧನೆ ನನ್ನದು….”

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

12 hours ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

12 hours ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

12 hours ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

12 hours ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

12 hours ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

20 hours ago