Advertisement
ಸುದ್ದಿಗಳು

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ಲಕ್ಷಕ್ಕೆ ಹೆಚ್ಚಳ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

Share

ಬೆಂಗಳೂರು: ಕರ್ತವ್ಯದಲ್ಲಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದರು.

Advertisement
Advertisement
Advertisement
Advertisement

ಅವರು ಇಂದು ನಗರದ ಅರಣ್ಯ ಭವನದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದ ನಂತರ ಮಾತನಾಡುತ್ತಿದ್ದರು.

Advertisement

ರಾಜ್ಯದಲ್ಲಿ ಒಟ್ಟು ಭೌಗೋಳಿಕ ವಿಸ್ತೀರ್ಣದ ಶೇ. 22ರಷ್ಟು ಅರಣ್ಯ ಪ್ರದೇಶ ಇರುವುದು ನೆಮ್ಮದಿ ನೀಡುವ ವಿಚಾರ. ಇದಕ್ಕಾಗಿ ಹಗಲಿರುಳು ಶ್ರಮಿಸುವ ಅರಣ್ಯ ಸಿಬ್ಬಂದಿಯ ಕಾಯಕ ಶ್ಲಾಘನೀಯ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅರಣ್ಯ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿರುವಾಗ ಮೃತಪಟ್ಟರೆ ನೀಡುವ ಪರಿಹಾರ ಮೊತ್ತವನ್ನು ಪೊಲೀಸ್ ಇಲಾಖೆಗೆ ಸರಿ ಸಮನಾಗಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಅಲ್ಲದೆ, ಹುತಾತ್ಮರ ಕುಟುಂಬಗಳ ಕ್ಷೇಮಾಭಿವೃದ್ಧಿಗೂ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Advertisement

ಅರಣ್ಯ ಸಂಪತ್ತಿನ ರಕ್ಷಣೆ ಮಾಡುವಾಗ ದುರಾದೃಷ್ಟವಶಾತ್ ಕಳ್ಳಕಾಕರ, ವನ್ಯಪ್ರಾಣಿಗಳ ಹಾಗೂ ಇತರೆ ದುಷ್ಟಶಕ್ತಿಗಳ ದಾಳಿಗೆ ಸಿಲುಕಿ ಈವರೆಗೆ 47 ಅರಣ್ಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ.

ಈ ಹಿಂದೆ ಕುಖ್ಯಾತ ಕಾಡುಗಳ್ಳ ವೀರಪ್ಪನ್‍ನ ಮೋಸದ ಬಲೆಗೆ ಸಿಲುಕಿ ಶ್ರೀ ಪಿ. ಶ್ರೀನಿವಾಸ್, ಭಾರತೀಯ ಅರಣ್ಯ ಸೇವಾ ಅಧಿಕಾರಿ ಇವರು ಹುತಾತ್ಮರಾಗಿದ್ದರು. ಇವರು ಸಹ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಇವರ ಕಾರ್ಯದಕ್ಷತೆ ಪ್ರಾಮಾಣಿಕತೆ ಹಾಗೂ ಅಮೋಘ ಸೇವೆಯನ್ನು ಮೆಚ್ಚಿ ಭಾರತ ಸರ್ಕಾರ ಇವರಿಗೆ “ಕೀರ್ತಿ ಚಕ್ರ” ಶೌರ್ಯ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿ ಗೌರವಿಸಿರುವುದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.

Advertisement

ಕರ್ತವ್ಯ ನಿರ್ವಹಿಸುವಾಗ ಕಾಡಾನೆಯ ದಾಳಿಯಿಂದ ಮೃತಪಟ್ಟ ಕ್ಷೇಮಾಭಿವೃದ್ಧಿ ನೌಕರರಾದ ಕಾವೇರಿ ವನ್ಯಜೀವಿ ವಿಭಾಗದ ಅಲಗಾ ಹಾಗೂ ಹಾಸನ ವಿಭಾಗದ ಎಲ್.ಎನ್. ಅಣ್ಣೇಗೌಡ ಇವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಅವರು ಆನೆಗಳ ದಾಳಿಯಿಂದ ಪ್ರಾಣ ಹಾನಿ, ರೈತರ ಬೆಳೆ ಹಾನಿ ಹಾಗೂ ಆರ್ಥಿಕ ಸಂಕಷ್ಟವನ್ನು ಪರಿಗಣಿಸಿ ಮಾನವ – ಆನೆ ಸಂಘರ್ಷ ನಿಯಂತ್ರಣಕ್ಕೆ ಸರ್ಕಾರ ಯೋಜನೆ ರೂಪಿಸಿದೆ.

ರಾಜ್ಯದ ಅರಣ್ಯ ಸಂಪತ್ತು ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಬೇಕಾಗಿದ್ದು, ಅದಕ್ಕಾಗಿ ವಿವಿಧ ಹಂತದ ಕ್ಷೇತ್ರ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನೇಮಿಸಲು ಸರ್ಕಾರ ಕ್ರಮ ಕೈಗೊಂಡಿರುತ್ತದೆ.
. ಅರಣ್ಯ ಪ್ರದೇಶಗಳಲ್ಲಿ ಬೇಟೆ ಹಾಗೂ ಅಕ್ರಮ ಚಟುವಟಿಕೆಗಳ ನಿಗ್ರಹಕ್ಕಾಗಿ ಅತ್ಯಾಧುನಿಕ ಸಲಕರಣೆಗಳನ್ನು ಅರಣ್ಯ ಸಿಬ್ಬಂದಿಗೆ ಪೂರೈಸಲಾಗುತ್ತಿದೆ. ಈ ಕ್ರಮ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದರೊಂದಿಗೆ ಕಳ್ಳಬೇಟೆ ಮೇಲೂ ಕಣ್ಣಿಡಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

Advertisement

ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಸಂದೀಪ್ ದವೆ , ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪುನ ಟಿ ಶ್ರೀಧರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

6 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

6 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

6 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

14 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

15 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

16 hours ago