MIRROR FOCUS

ಹೆಚ್ಚಾದ ಮಳೆ, ತುಂಬಿದ ಜಲಾಶಯಗಳು, ಈ ಬಾರಿ ವಿದ್ಯುತ್ ಅಭಾವ ಇರದು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆ ಬಿದ್ದ ಪ್ರಮಾಣ ಕಡಿಮೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ಆದರೆ ಒಮ್ಮೆಲೇ ಭಾರೀ ಮಳೆ, ಪ್ರವಾಹ ಬಂದ ಹಿನ್ನೆಲೆಯಲ್ಲಿ  ನೀರು ಸಾಕಷ್ಟು ಬಂದು ಜಲಾಶಯಗಳು ತುಂಬಿವೆ. ಹೀಗಾಗಿ ರಾಜ್ಯಕ್ಕೆ ಈ ಬಾರಿ ವಿದ್ಯುತ್ ಅಭಾವ ಇರದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಬೇಸಗೆಯಲ್ಲಿ ಹೇಗೆ ಎಂಬುದರ ಬಗ್ಗೆ ಇನ್ನೂ ನಿರ್ಧರಿಸಲು ಸಾಧ್ಯವಿಲ್ಲ, ಈಗಿನ ಅಂದಾಜು ಪ್ರಕಾರ ಅಭಾವ ಕಂಡುಬರದು. ಇದೇ ಸಂದರ್ಭ ರಾಜ್ಯದ ಹಲವು ಕಡೆಗಳಲ್ಲಿ  ಮಳೆಯಾಗಿಲ್ಲ. ಕೆರೆಗಳು ಭರ್ತಿಯಾಗಿಲ್ಲ.ಈ ಬಗ್ಗೆ ಫೋಕಸ್..

Advertisement
Advertisement

ಈ ಬಾರಿ ವಿದ್ಯುತ್ ಅಭಾವ ಕಂಡುಬಾರದು. ಹೀಗೊಂದು ಅಭಿಪ್ರಾತಯ ಈಗ ವ್ಯಕ್ತವಾಗಿದೆ. ಮಳೆಯಿಂದ ರಾಜ್ಯದಲ್ಲಿ ಸಾಕಷ್ಟು ಹಾನಿಯಾಗಿದೆ. ಇಂದಿಗೂ ಜನ ಆತಂಕದಿಂದ ಇದ್ದಾರೆ. ಇದರ ನಡುವೆಯೇ ವಿದ್ಯುತ್ ಬಗ್ಗೆ ಯೋಚನೆ ಶುರುವಾದಾಗ ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಎಂಬ ವರದಿ ಬಂದಿದೆ. ಹೀಗಾಗಿ ವಿದ್ಯುತ್ ಬಗ್ಗೆ ಭರವಸೆ ಮೂಡಿದೆ.

ಪ್ರತಿ ಬಾರಿ ರಾಜ್ಯವನ್ನು ಕಾಡುವ ವಿದ್ಯುತ್‌ ಅಭಾವ ಈಚೆಗೆ ಹೆಚ್ಚಾಗಿತ್ತು. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಮಾಡುವ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಇರುವ ಕಾರಣದಿಂದ ಈ ಬಾರಿಯ ಬೇಸಿಗೆಯಲ್ಲಿ ಹೆಚ್ಚೇನು ವಿದ್ಯುತ್‌ ಅಭಾವ ಇರಲಾರದು ಎಂಬ ಅಂದಾಜು ವ್ಯಕ್ತವಾಗಿದೆ. ರಾಜ್ಯದಲ್ಲಿ ಪ್ರಮುಖ ವಿದ್ಯುತ್‌ ಉತ್ಪಾದನ ಕೇಂದ್ರವಾಗಿರುವ ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಉಳಿದಿದ್ದು, ಸೋಮವಾರ ಸಂಜೆ 6 ಗಂಟೆಯಿಂದ 3 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಹೊರ ಬಿಡಲಾಗಿದೆ. ನೀರಿನ ಮಟ್ಟ ಸೋಮವಾರ ಸಂಜೆ 1818.40 (ಪೂರ್ಣಮಟ್ಟ 1819) ಅಡಿಗೆ ತಲುಪಿದ್ದು ಒಳಹರಿವು 25 ಸಾವಿರ ಕ್ಯೂಸೆಕ್ ಇದೆ. ಜಲಾನಯನ ಪ್ರದೇಶವಾದ ಹೊಸನಗರ ಮತ್ತು ಸಾಗರದಲ್ಲಿ ಸತತ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಾದರೂ ರಾಜ್ಯದ 1685 ಕೆರೆಗಳಲ್ಲಿ ನೀರಿಲ್ಲ….!

 ಪ್ರವಾಹದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿದ್ದರೂ ಇನ್ನೂ  1685 ಕೆರೆಗಳಿಗೆ ನೀರೇ ಹರಿದಿಲ್ಲ. ದಾಖಲೆಗಳ ಪ್ರಕಾರ ರಾಜ್ಯದ 3611 ಸಣ್ಣ ಕೆರೆಗಳ ಪೈಕಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವುದು 944 ಕೆರೆಗಳು ಮಾತ್ರ….!  ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಆಗಸ್ಟ್ ವರೆಗೆ ರಾಜ್ಯದ 3611 ಸಣ್ಣ ಕೆರೆಗಳ ಪೈಕಿ 1685 ಕೆರೆಗಳಿಗೆ ನೀರೇ ಬಂದಿಲ್ಲ. ಹೀಗಾಗಿ ಸಂಪೂರ್ಣ ಒಣಗಿತ್ತು. ಅದರಲ್ಲಿ ಕೋಲಾರ 125, ಚಿಕ್ಕಬಳ್ಳಾಪುರ 173, ತುಮಕೂರು 297, ಚಿತ್ರದುರ್ಗ 116, ದಾವಣಗೆರೆ 64, ಚಾಮರಾಜನಗರ 51, ಮಂಡ್ಯ 37, ಹಾಸನ 54, ಬಳ್ಳಾರಿ 76, ಕೊಪ್ಪಳ 40, ರಾಯಚೂರು 21, ಕಲಬುರಗಿ 93, ಬೀದರ್ 123, ಬೆಳಗಾವಿ 74, ಬಾಗಲಕೋಟೆ 54, ವಿಜಯ ಪುರ 111, ಯಾದಗಿರಿ 67, ಚಿಕ್ಕಮಗಳೂರು 30 ಕೆರೆಗಳಿಗೆ ನೀರೇ ಬಾರದ ಸ್ಥಿತಿ ಇದೆ.

Advertisement

ಶಿವಮೊಗ್ಗ , ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಕೆರೆಗಳು ಸೇರಿ ದಂತೆ 994 ಕೆರೆಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿವೆ. 652 ಕೆರೆಗಳಿಗೆ ಶೇ.30ರಷ್ಟು ನೀರು ಬಂದಿದ್ದರೆ 150 ಕೆರೆಗಳಿಗೆ ಅರ್ಧದಷ್ಟು ಮಾತ್ರ ನೀರು ಬಂದಿದೆ.

 

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

44 seconds ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

51 minutes ago

ಶುರುವಾಯಿತು ಕಡಲುಕೊರೆತ..!

ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ  ವಿಧಾನಸಭಾ ಸ್ಪೀಕರ್‌…

59 minutes ago

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ…

3 hours ago

ನಿರಂತರ ಮಳೆಯಿಂದಾಗಿ ತರಕಾರಿಗಳ ಬೆಲೆ ನಗರದಲ್ಲಿ ಏನಾಗಿದೆ..?

ಕಳೆದ ಎರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯಾದ್ಯಂತ ತರಕಾರಿಗಳು ಮತ್ತು ಸೊಪ್ಪುಗಳ…

8 hours ago

ಹವಾಮಾನ ವರದಿ | 27-06-2025 | ಜೂ.29-30 ಮಳೆಯ ಪ್ರಮಾಣ ಕಡಿಮೆ ಇರಬಹುದು – ಕೃಷಿಕರು ಗಮನಿಸಿ |

ಈಗಿನಂತೆ ಜೂನ್ 29 ಹಾಗೂ 30 ರಂದು ಮಳೆಯ ಪ್ರಮಾಣ ಕಡಿಮೆಯಿರುವ ಸಾಧ್ಯತೆಗಳಿದ್ದು,…

9 hours ago