Advertisement
MIRROR FOCUS

ಹೆಚ್ಚಾದ ಮಳೆ, ತುಂಬಿದ ಜಲಾಶಯಗಳು, ಈ ಬಾರಿ ವಿದ್ಯುತ್ ಅಭಾವ ಇರದು…!

Share

ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆ ಬಿದ್ದ ಪ್ರಮಾಣ ಕಡಿಮೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ಆದರೆ ಒಮ್ಮೆಲೇ ಭಾರೀ ಮಳೆ, ಪ್ರವಾಹ ಬಂದ ಹಿನ್ನೆಲೆಯಲ್ಲಿ  ನೀರು ಸಾಕಷ್ಟು ಬಂದು ಜಲಾಶಯಗಳು ತುಂಬಿವೆ. ಹೀಗಾಗಿ ರಾಜ್ಯಕ್ಕೆ ಈ ಬಾರಿ ವಿದ್ಯುತ್ ಅಭಾವ ಇರದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಆದರೆ ಬೇಸಗೆಯಲ್ಲಿ ಹೇಗೆ ಎಂಬುದರ ಬಗ್ಗೆ ಇನ್ನೂ ನಿರ್ಧರಿಸಲು ಸಾಧ್ಯವಿಲ್ಲ, ಈಗಿನ ಅಂದಾಜು ಪ್ರಕಾರ ಅಭಾವ ಕಂಡುಬರದು. ಇದೇ ಸಂದರ್ಭ ರಾಜ್ಯದ ಹಲವು ಕಡೆಗಳಲ್ಲಿ  ಮಳೆಯಾಗಿಲ್ಲ. ಕೆರೆಗಳು ಭರ್ತಿಯಾಗಿಲ್ಲ.ಈ ಬಗ್ಗೆ ಫೋಕಸ್..


ಈ ಬಾರಿ ವಿದ್ಯುತ್ ಅಭಾವ ಕಂಡುಬಾರದು. ಹೀಗೊಂದು ಅಭಿಪ್ರಾತಯ ಈಗ ವ್ಯಕ್ತವಾಗಿದೆ. ಮಳೆಯಿಂದ ರಾಜ್ಯದಲ್ಲಿ ಸಾಕಷ್ಟು ಹಾನಿಯಾಗಿದೆ. ಇಂದಿಗೂ ಜನ ಆತಂಕದಿಂದ ಇದ್ದಾರೆ. ಇದರ ನಡುವೆಯೇ ವಿದ್ಯುತ್ ಬಗ್ಗೆ ಯೋಚನೆ ಶುರುವಾದಾಗ ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಎಂಬ ವರದಿ ಬಂದಿದೆ. ಹೀಗಾಗಿ ವಿದ್ಯುತ್ ಬಗ್ಗೆ ಭರವಸೆ ಮೂಡಿದೆ.

Advertisement

ಪ್ರತಿ ಬಾರಿ ರಾಜ್ಯವನ್ನು ಕಾಡುವ ವಿದ್ಯುತ್‌ ಅಭಾವ ಈಚೆಗೆ ಹೆಚ್ಚಾಗಿತ್ತು. ಕಳೆದ ಎರಡು ತಿಂಗಳಿನಿಂದ ರಾಜ್ಯದಲ್ಲಿ ವಿದ್ಯುತ್‌ ಉತ್ಪಾದನೆ ಮಾಡುವ ಜಲಾಶಯಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಇರುವ ಕಾರಣದಿಂದ ಈ ಬಾರಿಯ ಬೇಸಿಗೆಯಲ್ಲಿ ಹೆಚ್ಚೇನು ವಿದ್ಯುತ್‌ ಅಭಾವ ಇರಲಾರದು ಎಂಬ ಅಂದಾಜು ವ್ಯಕ್ತವಾಗಿದೆ. ರಾಜ್ಯದಲ್ಲಿ ಪ್ರಮುಖ ವಿದ್ಯುತ್‌ ಉತ್ಪಾದನ ಕೇಂದ್ರವಾಗಿರುವ ಲಿಂಗನಮಕ್ಕಿ ಜಲಾಶಯ ಭರ್ತಿಗೆ ಕೇವಲ ಅರ್ಧ ಅಡಿ ಬಾಕಿ ಉಳಿದಿದ್ದು, ಸೋಮವಾರ ಸಂಜೆ 6 ಗಂಟೆಯಿಂದ 3 ಕ್ರಸ್ಟ್ ಗೇಟ್‌ಗಳ ಮೂಲಕ ನೀರು ಹೊರ ಬಿಡಲಾಗಿದೆ. ನೀರಿನ ಮಟ್ಟ ಸೋಮವಾರ ಸಂಜೆ 1818.40 (ಪೂರ್ಣಮಟ್ಟ 1819) ಅಡಿಗೆ ತಲುಪಿದ್ದು ಒಳಹರಿವು 25 ಸಾವಿರ ಕ್ಯೂಸೆಕ್ ಇದೆ. ಜಲಾನಯನ ಪ್ರದೇಶವಾದ ಹೊಸನಗರ ಮತ್ತು ಸಾಗರದಲ್ಲಿ ಸತತ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯಾದರೂ ರಾಜ್ಯದ 1685 ಕೆರೆಗಳಲ್ಲಿ ನೀರಿಲ್ಲ….!

Advertisement

 ಪ್ರವಾಹದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿದ್ದರೂ ಇನ್ನೂ  1685 ಕೆರೆಗಳಿಗೆ ನೀರೇ ಹರಿದಿಲ್ಲ. ದಾಖಲೆಗಳ ಪ್ರಕಾರ ರಾಜ್ಯದ 3611 ಸಣ್ಣ ಕೆರೆಗಳ ಪೈಕಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವುದು 944 ಕೆರೆಗಳು ಮಾತ್ರ….!  ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಆಗಸ್ಟ್ ವರೆಗೆ ರಾಜ್ಯದ 3611 ಸಣ್ಣ ಕೆರೆಗಳ ಪೈಕಿ 1685 ಕೆರೆಗಳಿಗೆ ನೀರೇ ಬಂದಿಲ್ಲ. ಹೀಗಾಗಿ ಸಂಪೂರ್ಣ ಒಣಗಿತ್ತು. ಅದರಲ್ಲಿ ಕೋಲಾರ 125, ಚಿಕ್ಕಬಳ್ಳಾಪುರ 173, ತುಮಕೂರು 297, ಚಿತ್ರದುರ್ಗ 116, ದಾವಣಗೆರೆ 64, ಚಾಮರಾಜನಗರ 51, ಮಂಡ್ಯ 37, ಹಾಸನ 54, ಬಳ್ಳಾರಿ 76, ಕೊಪ್ಪಳ 40, ರಾಯಚೂರು 21, ಕಲಬುರಗಿ 93, ಬೀದರ್ 123, ಬೆಳಗಾವಿ 74, ಬಾಗಲಕೋಟೆ 54, ವಿಜಯ ಪುರ 111, ಯಾದಗಿರಿ 67, ಚಿಕ್ಕಮಗಳೂರು 30 ಕೆರೆಗಳಿಗೆ ನೀರೇ ಬಾರದ ಸ್ಥಿತಿ ಇದೆ.

ಶಿವಮೊಗ್ಗ , ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಕೆರೆಗಳು ಸೇರಿ ದಂತೆ 994 ಕೆರೆಗಳು ಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿವೆ. 652 ಕೆರೆಗಳಿಗೆ ಶೇ.30ರಷ್ಟು ನೀರು ಬಂದಿದ್ದರೆ 150 ಕೆರೆಗಳಿಗೆ ಅರ್ಧದಷ್ಟು ಮಾತ್ರ ನೀರು ಬಂದಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

7 hours ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

10 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

10 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

18 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

20 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

20 hours ago