Advertisement
ಕಾರ್ಯಕ್ರಮಗಳು

`ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ’ ಸುಳ್ಯದಲ್ಲಿ ಜಾಗೃತಿ ಜಾಥಾ

Share

ಸುಳ್ಯ: ಸುಳ್ಯ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಸುಳ್ಯ, ತಾಲೂಕು ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ತಾಲೂಕು ಆರೋಗ್ಯ ಇಲಾಖೆ ಇದರ ವತಿಯಿಂದ `ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ’ ಜಾಗೃತಿ ಜಾಥಾ ಸುಳ್ಯದಲ್ಲಿ ಶನಿವಾರ ನಡೆಯಿತು.

ಸುಳ್ಯ ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಪುರುಷೋತ್ತಮ ಎಂ. ಜಾಥಾಕ್ಕೆ ಚಾಲನೆ ನೀಡಿದರು. ಸುಳ್ಯ ಸಿವಿಲ್ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ಯಶ್ವಂತ್‍ಕುಮಾರ್ ಕೆ., ಸುಳ್ಯ ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಸುಳ್ಯ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಬ್ರಹ್ಮಣ್ಯ, ಸುಳ್ಯ ಎಸ್‍ಐ ಎಂ.ಆರ್.ಹರೀಶ್, ಕ್ರೈಂ ಎಸ್‍ಐ ರತ್ನಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಶಿಕ್ಷಣ ಸಂಯೋಜಕ ಡಾ.ಸುಂದರ್ ಕೇನಾಜೆ, ಸುಳ್ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ನಟರಾಜ್, ವಕೀಲರ ಸಂಘದ ಕಾರ್ಯದರ್ಶಿ ಪುಷ್ಪರಾಜ್ ಗಾಂಭೀರ್, ಕೋಶಾಧಿಕಾರಿ ವಿನಯಕುಮಾರ್ ಮುಳುಗಾಡು, ವಕೀಲರಾದ ನಳಿನ್‍ಕುಮಾರ್ ಕೋಡ್ತುಗುಳಿ, ಭಾಸ್ಕರ ರಾವ್, ಜಗದೀಶ ಹುದೇರಿ, ಹರೀಶ್ ಬೂಡುಪನ್ನೆ, ಧರ್ಮಪಾಲ ಕೊೈಂಗಾಜೆ, ವಕೀಲರ ಸಂಘದ ಪದಾಧಿಕಾರಿಗಳು, ಸ್ಥಳೀಯ ಶಾಲಾ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು. ಸುಳ್ಯ ನಗರದ ಜ್ಯೋತಿ ವೃತ್ತದಿಂದ ಆರಂಭಗೊಂಡ ಜಾಥಾವು ನಗರದಲ್ಲಿ ಸಂಚರಿಸಿ ಕೆವಿಜಿ ಪುರಭವನದಲ್ಲಿ ಸಮಾಪನಗೊಂಡಿತು.

ಹೆಣ್ಣು ಮಕ್ಕಳ ರಕ್ಷಣೆ ಸಮಾಜದ ಹೊಣೆ: ನ್ಯಾಯಾಧೀಶ ಯಶ್ವಂತ್‍ಕುಮಾರ್

ನಮ್ಮ ಸಂವಿಧಾನದ ಆಶಯದಂತೆ ಹೆಣ್ಣು ಮಕ್ಕಳನ್ನು ರಕ್ಷಿಸುವುದು ಮತ್ತು ಅವರಿಗೆ ಉತ್ತಮ ಶಿಕ್ಷಣ ನೀಡುವುದು ಸಮಾಜದ ಹೊಣೆ ಎಂದು ಜಾಥಾದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸುಳ್ಯ ಸಿವಿಲ್ ನ್ಯಾಯಾಲಯದ ಕಿರಿಯ ನ್ಯಾಯಾಧೀಶ ಯಶ್ವಂತ್‍ಕುಮಾರ್.ಕೆ ಹೇಳಿದರು. ಲಿಂಗ ತಾರತಮ್ಯ ಮತ್ತು ಲಿಂಗಾನುಪಾತದಲ್ಲಿನ ವ್ಯತ್ಯಾಸ ಸಮಾಜಕ್ಕೆ ಮತ್ತು ದೇಶಕ್ಕೆ ದೊಡ್ಡ ಪಿಡುಗು ಆಗಬಹುದು. ಲಿಂಗ ತಾರತಮ್ಯ ಮತ್ತು ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲೆಂದೇ ಕಾನೂನಿನಲ್ಲಿ ತಿದ್ದುಪಡಿ ತಂದು ಹೆಣ್ಣು ಮಕ್ಕಳಿಗೆ ಸಮಾನ ಹಕ್ಕನ್ನು ನೀಡಲಾಗಿದೆ. ಆಸ್ತಿಯಲ್ಲಿ ಸಮಾನ ಹಕ್ಕು ಮತ್ತು ಇತರ ಸ್ಥಾನಮಾನಗಳಲ್ಲಿಯೂ ಸಮಾನತೆಯನ್ನು ನೀಡಲಾಗಿದೆ. ಹೆಣ್ಣು ಮಗು ಎಂಬ ತಾತ್ಸಾರ ಮನೋಭಾವ ಬೇಡ. ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಶಿಕ್ಷಣ ನೀಡುವ ನಿಟ್ಟಿನಲ್ಲಿ ಇನ್ನಷ್ಟು ಜಾಗೃತಿ ಅಗತ್ಯ ಎಂದು ಅವರು ಹೇಳಿದರು.

ವಕೀಲರ ಸಂಘದ ಅಧ್ಯಕ್ಷ ಎಂ.ವೆಂಕಪ್ಪ ಗೌಡ ಮಾತನಾಡಿ ದೇಶದಲ್ಲಿ ಹಲವೆಡೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಕಂಡು ಬರುತ್ತದೆ. ಅದನ್ನೆಲ್ಲ ಮೆಟ್ಟಿ ನಿಂತು ಹೆಣ್ಣು ಮಕ್ಕಳು ಗೌರವಯುತ ಬದುಕನ್ನು ನಡೆಸುವ ವಾತಾವರಣ ನಿರ್ಮಾಣವಾಗಬೇಕು ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

11 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

12 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

19 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

1 day ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

1 day ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago