Advertisement
ಅನುಕ್ರಮ

ಹೊರಡುವ ಮುನ್ನ

Share
ಪ್ರೀತಿಸಿದವಳ ಜೊತೆ ನಡೆದವಳು
ಎದೆ ಹಾಲನುಣಿಸಿದವಳ ಮರೆತಳು
ತಂದೆಯ ಪ್ರೀತಿಯನ್ನು ಕಡೆಗಣಿಸಿದವಳು
ಇನಿಯನ ಪ್ರೀತಿಯೇ ಹೆಚ್ಚೆಂದಳು ||೧||
ಹೆತ್ತವರಿಗೆ ಮಗಳು ತೊರೆದ ನೋವು
ಸುತ್ತಣದವರ ಚುಚ್ಚು ಮಾತಿನ ನೋವು
ಕಾಣಲಿಲ್ಲ ಅವಳಿಗೆ ಹೆತ್ತೆವರ ಕಣ್ಣೀರು
ಅವಳಿಗೀಗ ಅವನ ಪ್ರೀತಿಯೇ ಎಳನೀರು ||೨||
ಜಗವ ಸುತ್ತಿಸಿದ ಪ್ರೇಮಿಯ ಕೈ ಖಾಲಿಯಾಗಿದೆ
ದುಡಿವ ಅನಿವಾರ್ಯತೆ ಬದುಕಲ್ಲಿ ಎದುರಾಗಿದೆ
ಶ್ರಮಕ್ಕೆ ತಕ್ಕ ಪ್ರತಿಫಲ ದೊರಕದಾಗಿದೆ
ಮನೆಯಲ್ಲಿ ಜಗಳವೀಗ ಶುರುವಾಗಿದೆ ||೩||
ಆಕೆಯೀಗ ತುಂಬು ಗರ್ಭವತಿ
ಅವನಿಗಿಲ್ಲ ಅವಳಲ್ಲಿ ಮೊದಲಿನಂತೆ ಪ್ರೀತಿ
ಅವಳ ಬಾಳಾಗಿದೆ ಇಂದು ಅವನ ಕೈಸೆರೆ
ಅವಳಿಗೀಗ ಬೇಕಿದೆ ಹೆತ್ತವರ ಒಲವಿನಾಸರೆ ||೪||
ಮನವಿನಿಂದು ತಪ್ಪಿಗಾಗಿ ಮರುಗುತಿದೆ
ಹೆತ್ತವರ ಆಸರೆಗಾಗಿ ಪರಿತಪಿಸುತ್ತಿದೆ
ಕ್ಷಮೆಕೋರಲು ಮನವಿಂದು ಕಾಯುತಿದೆ
ಮಾಡಿದ ತಪ್ಪು ಮನವನ್ನು ಚುಚ್ಚುತ್ತಿದೆ ||೫||
ಪ್ರೀತಿಸುವ ಮುನ್ನ ಯೋಚಿಸಬೇಕು ಕಂದಾ
ಹೆತ್ತವರ ಒಪ್ಪಿಸಿ ನಡೆದರೆ ಆನಂದಾ
ಮುತ್ತಿನ ಮತ್ತಿನಿಂದೆ ನೀ‌ ಹೊರಡಬೇಡ
ತುತ್ತನ್ನು ಕಡೆಗಣಿಸಿ ನಡೆಯಬೇಡ ||೬||
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 09-09-2026 | ಕರ್ನಾಟಕದಲ್ಲಿ ಮಳೆಯ ಚಿತ್ರಣ ಬದಲಾಗುತ್ತಿದೆ – ಸೆ.11ರಿಂದ ಕರಾವಳಿಯಲ್ಲಿ ಬದಲಾವಣೆ

ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…

3 hours ago

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

10 hours ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

17 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

19 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

19 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

1 day ago