Advertisement
ಅನುಕ್ರಮ

ಹೊರಡುವ ಮುನ್ನ

Share
ಪ್ರೀತಿಸಿದವಳ ಜೊತೆ ನಡೆದವಳು
ಎದೆ ಹಾಲನುಣಿಸಿದವಳ ಮರೆತಳು
ತಂದೆಯ ಪ್ರೀತಿಯನ್ನು ಕಡೆಗಣಿಸಿದವಳು
ಇನಿಯನ ಪ್ರೀತಿಯೇ ಹೆಚ್ಚೆಂದಳು ||೧||
ಹೆತ್ತವರಿಗೆ ಮಗಳು ತೊರೆದ ನೋವು
ಸುತ್ತಣದವರ ಚುಚ್ಚು ಮಾತಿನ ನೋವು
ಕಾಣಲಿಲ್ಲ ಅವಳಿಗೆ ಹೆತ್ತೆವರ ಕಣ್ಣೀರು
ಅವಳಿಗೀಗ ಅವನ ಪ್ರೀತಿಯೇ ಎಳನೀರು ||೨||
ಜಗವ ಸುತ್ತಿಸಿದ ಪ್ರೇಮಿಯ ಕೈ ಖಾಲಿಯಾಗಿದೆ
ದುಡಿವ ಅನಿವಾರ್ಯತೆ ಬದುಕಲ್ಲಿ ಎದುರಾಗಿದೆ
ಶ್ರಮಕ್ಕೆ ತಕ್ಕ ಪ್ರತಿಫಲ ದೊರಕದಾಗಿದೆ
ಮನೆಯಲ್ಲಿ ಜಗಳವೀಗ ಶುರುವಾಗಿದೆ ||೩||
ಆಕೆಯೀಗ ತುಂಬು ಗರ್ಭವತಿ
ಅವನಿಗಿಲ್ಲ ಅವಳಲ್ಲಿ ಮೊದಲಿನಂತೆ ಪ್ರೀತಿ
ಅವಳ ಬಾಳಾಗಿದೆ ಇಂದು ಅವನ ಕೈಸೆರೆ
ಅವಳಿಗೀಗ ಬೇಕಿದೆ ಹೆತ್ತವರ ಒಲವಿನಾಸರೆ ||೪||
ಮನವಿನಿಂದು ತಪ್ಪಿಗಾಗಿ ಮರುಗುತಿದೆ
ಹೆತ್ತವರ ಆಸರೆಗಾಗಿ ಪರಿತಪಿಸುತ್ತಿದೆ
ಕ್ಷಮೆಕೋರಲು ಮನವಿಂದು ಕಾಯುತಿದೆ
ಮಾಡಿದ ತಪ್ಪು ಮನವನ್ನು ಚುಚ್ಚುತ್ತಿದೆ ||೫||
ಪ್ರೀತಿಸುವ ಮುನ್ನ ಯೋಚಿಸಬೇಕು ಕಂದಾ
ಹೆತ್ತವರ ಒಪ್ಪಿಸಿ ನಡೆದರೆ ಆನಂದಾ
ಮುತ್ತಿನ ಮತ್ತಿನಿಂದೆ ನೀ‌ ಹೊರಡಬೇಡ
ತುತ್ತನ್ನು ಕಡೆಗಣಿಸಿ ನಡೆಯಬೇಡ ||೬||
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

2 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

2 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

2 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

2 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

2 hours ago

ಕರಾವಳಿ ಭಾಗಕ್ಕೆ ಗುಣಮಟ್ಟದ ವಿದ್ಯುತ್ ಸೌಲಭ್ಯ : ಜುಲೈ 15ರೊಳಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ ಪೂರ್ಣ

ಕರಾವಳಿ ಭಾಗದ ವಿದ್ಯುತ್ ಪೂರೈಕೆ ಸುಧಾರಣೆಗೆ ಕಡಂದಲೆ 400 ಕೆವಿ ಉಪಕೇಂದ್ರ ಕಾಮಗಾರಿ…

2 hours ago