Advertisement
ಅನುಕ್ರಮ

ಹೊರಡುವ ಮುನ್ನ

Share
ಪ್ರೀತಿಸಿದವಳ ಜೊತೆ ನಡೆದವಳು
ಎದೆ ಹಾಲನುಣಿಸಿದವಳ ಮರೆತಳು
ತಂದೆಯ ಪ್ರೀತಿಯನ್ನು ಕಡೆಗಣಿಸಿದವಳು
ಇನಿಯನ ಪ್ರೀತಿಯೇ ಹೆಚ್ಚೆಂದಳು ||೧||
ಹೆತ್ತವರಿಗೆ ಮಗಳು ತೊರೆದ ನೋವು
ಸುತ್ತಣದವರ ಚುಚ್ಚು ಮಾತಿನ ನೋವು
ಕಾಣಲಿಲ್ಲ ಅವಳಿಗೆ ಹೆತ್ತೆವರ ಕಣ್ಣೀರು
ಅವಳಿಗೀಗ ಅವನ ಪ್ರೀತಿಯೇ ಎಳನೀರು ||೨||
ಜಗವ ಸುತ್ತಿಸಿದ ಪ್ರೇಮಿಯ ಕೈ ಖಾಲಿಯಾಗಿದೆ
ದುಡಿವ ಅನಿವಾರ್ಯತೆ ಬದುಕಲ್ಲಿ ಎದುರಾಗಿದೆ
ಶ್ರಮಕ್ಕೆ ತಕ್ಕ ಪ್ರತಿಫಲ ದೊರಕದಾಗಿದೆ
ಮನೆಯಲ್ಲಿ ಜಗಳವೀಗ ಶುರುವಾಗಿದೆ ||೩||
ಆಕೆಯೀಗ ತುಂಬು ಗರ್ಭವತಿ
ಅವನಿಗಿಲ್ಲ ಅವಳಲ್ಲಿ ಮೊದಲಿನಂತೆ ಪ್ರೀತಿ
ಅವಳ ಬಾಳಾಗಿದೆ ಇಂದು ಅವನ ಕೈಸೆರೆ
ಅವಳಿಗೀಗ ಬೇಕಿದೆ ಹೆತ್ತವರ ಒಲವಿನಾಸರೆ ||೪||
ಮನವಿನಿಂದು ತಪ್ಪಿಗಾಗಿ ಮರುಗುತಿದೆ
ಹೆತ್ತವರ ಆಸರೆಗಾಗಿ ಪರಿತಪಿಸುತ್ತಿದೆ
ಕ್ಷಮೆಕೋರಲು ಮನವಿಂದು ಕಾಯುತಿದೆ
ಮಾಡಿದ ತಪ್ಪು ಮನವನ್ನು ಚುಚ್ಚುತ್ತಿದೆ ||೫||
ಪ್ರೀತಿಸುವ ಮುನ್ನ ಯೋಚಿಸಬೇಕು ಕಂದಾ
ಹೆತ್ತವರ ಒಪ್ಪಿಸಿ ನಡೆದರೆ ಆನಂದಾ
ಮುತ್ತಿನ ಮತ್ತಿನಿಂದೆ ನೀ‌ ಹೊರಡಬೇಡ
ತುತ್ತನ್ನು ಕಡೆಗಣಿಸಿ ನಡೆಯಬೇಡ ||೬||
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

6 hours ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

6 hours ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

15 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

1 day ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

1 day ago