ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.
ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.
ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…