ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.
ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.
ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…