ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ಓಫ್ ಪುತ್ತೂರು ಇದರ ಆಶ್ರಯದಲ್ಲಿ ಶ್ಯಾಮ ಸುದರ್ಶನ್ ಹೊಸಮೂಲೆ ಇವರ ‘ತುಳುವರ ಸಂಗ್ರಾಮ’ – ಇದು ಕರಾವಳಿಯ ಸ್ವಾತಂತ್ರ್ಯ ಹೋರಾಟದ ಹೆಜ್ಜೆ ಗುರುತು’ ಎಂಬ ಕೃತಿ ಬಿಡುಗಡೆ ಸಮಾರಂಭ ಕಾರ್ಯಕ್ರಮವು ಇಂದು ಪುತ್ತೂರು ರೋಟರಿ ಟ್ರಸ್ಟ್ ಹಾಲ್ ಇಲ್ಲಿ ನಡೆಯಿತು.
ಪುಸ್ತಕವನ್ನು ಹಿರಿಯ ಸಾಹಿತಿಗಳಾದ ಡಾ.ಬಿ. ಪ್ರಭಾಕರ್ ಶಿಶಿಲ ಇವರು ಬಿಡುಗಡೆಗೊಳಿಸಿದರು. ಬಿಡುಗಡೆಗೊಳಿಸಿ ಮಾತುನಾಡಿದ ಅವರು ಇವತ್ತು ನಮ್ಮ ನಾಡಿನ ಇತಿಹಾಸದ ಬಗ್ಗೆ ಅಧ್ಯಯನ ಮಾಡಬೇಕಾದ ಅನಿರ್ವಾಯತೆ ಇದೆ. ಆದರೆ, ಇಂದು ಶ್ಯಾಮ ಸುದರ್ಶನ ಈ ಕೃತಿ ಒಂದು ಒಳ್ಳೆಯ ಪ್ರಯತ್ನ, ಇದಕ್ಕೆ ಇನ್ನರ್ ವ್ಹೀಲ್ ನೀಡಿದ ಬೆಂಬಲ ನಿಜಕ್ಕೂ ಶ್ಲಾಘನೀಯ. ಇಲ್ಲಿ ಹೋರಾಟ ಮಾಡಿದವರು ಅನೇಕರು ಅದರಲ್ಲೂ, ನಾರಣಪ್ಪ ಅವರಂತಹವರನ್ನು ದರೋಡೆಕೋರರು ಎಂಬುದು ದುರಂತ ಎಂದರು.
ಖ್ಯಾತ ವಾಗ್ಮಿಗಳಾದ ಶ್ರೀಕೃಷ್ಣ ಉಪಾಧ್ಯಾಯ ಕೃತಿಯ ಬಗ್ಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಸಂಶುದ್ದೀನ್ ಸಂಪ್ಯ, ಖ್ಯಾತ ನ್ಯಾಯವಾದಿಗಳಾದ ಮಹೇಶ್ ಕಜೆ, ಇನ್ನರ್ ವ್ಹೀಲ್ ಅಧ್ಯಕ್ಷೆ ಸಹನಾ ಭವಿನ್, ಇನ್ನರ್ ವ್ಹೀಲ್ ಕಾರ್ಯದರ್ಶಿ ವಿಜಯಲಕ್ಷ್ಮಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕೃತಿಕಾರ ಶ್ಯಾಮ ಸುದರ್ಶನ ಹೊಸಮೂಲೆ ಪ್ರಾಸ್ತಾವಿಕ ಮಾತನಾಡಿದರು. ಸುಕ್ಷಿತಾ ರಾವ್ ಕಾರ್ಯಕ್ರಮ ನಿರೂಪಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…