ಮಡಿಕೇರಿ :ಕಾಡಾನೆ ದಾಳಿಗೆ ವ್ಯಕ್ತಿಯೊರ್ವ ಗಾಯಗೊಂಡ ಘಟನೆ ಮೇಕೂರು ಹೊಸ್ಕೇರಿ ಗ್ರಾಮದಲ್ಲಿ ನಡೆದಿದೆ.
ಬಾಡಗ ಬಾಣಂಗಾಲ ಗ್ರಾಮದ ನಿವಾಸಿ ಪೆರುಮಾಳ್ (60) ಮೇಕೂರು ಹೊಸ್ಕೇರಿ ಗ್ರಾಮದ ಮಾದಯ್ಯ ಎಂಬುವವರ ಕಾಫಿ ತೋಟದಲ್ಲಿ ಕೆಸಲ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಬಳಿಕ ಕಾಡಾನೆಯು ಪೆರುಮಾಳ್ ಅನ್ನು ಸೊಂಡಿಲಿನಿಂದ ಎತ್ತಿ ಎಸೆದಿದ್ದು, ಪರಿಣಾಮ ಪೆರುಮಾಳ್ ಸೊಂಟ ಹಾಗೂ ಕಾಲಿಗೆ ಗಂಭೀರ ಗಾಯವಾಗಿದೆ. ಕೂಡಲೇ ಗಾಯಾಳು ಪೆರುಮಾಳ್ ಅನ್ನು ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ತಿತಿಮತಿ ಉಪ ವಲಯ ಅರಣ್ಯಾಧಿಕಾರಿ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …
ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ ತಪಾಸಣೆ…
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…