ಸುದ್ದಿಗಳು

ಹೊಸ ತಲೆಮಾರು ಓದಿನಿಂದ ದೂರ ಸರಿಯುವುದು ಪತ್ರಿಕಾ ಕ್ಷೇತ್ರಕ್ಕೆ ಸವಾಲು- ಡಾ.ಕೇನಾಜೆ : ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ- ಸನ್ಮಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಆಧುನಿಕ ಯುಗದಲ್ಲಿ ಹೊಸ ತಲೆಮಾರು ಓದಿನಿಂದ ದೂರ ಸರಿಯುತಿರುವುದು ಪತ್ರಿಕಾ ಕ್ಷೇತ್ರದ ದೊಡ್ಡ ಸವಾಲು ಎಂದು ಪುತ್ತೂರು ಡಾ.ಶಿವರಾಮ ಕಾರಂತ ಬಾಲವನದ ಆಡಳಿತಾಧಿಕಾರಿ, ಲೇಖಕ ಡಾ.ಸುಂದರ ಕೇನಾಜೆ ಹೇಳಿದ್ದಾರೆ.

Advertisement
Advertisement

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು. ಜಾಗೃತಿ, ಅರಿವು ಮೂಡಿಸುವ ಬದಲು ಹಲವು ಸಂದರ್ಭದಲ್ಲಿ ಮಾಧ್ಯಮಗಳು ಭಯಗೊಳಿಸುತ್ತವೆ. ಭಯಗೊಳಿಸುವ ವಾತಾವರಣದಿಂದ ಜನರು ದೂರ ಹೋಗುವ ಸಾಧ್ಯತೆ ಹೆಚ್ಚು. ಆದುದರಿಂದ ಅರಿವು, ತಿಳುವಳಿಕೆ ಮತ್ತು ಜಾಗೃತಿ ಮೂಡಿಸುವ ಮೂಲಕ ಮಾಧ್ಯಮಗಳು ಜನರನ್ನು ಹತ್ತಿರವಾಗಿಸಬೇಕು. ಶಿಕ್ಷಣ, ಆರೋಗ್ಯ, ಕಲೆ, ಸಾಹಿತ್ಯವನ್ನು ನಾವು ಎಂದೂ ಉದ್ಯಮ ಎಂದು ಪರಿಗಣಿಸಿಲ್ಲ. ಆದರೆ ಅದೇ ಸಾಲಿಗೆ ಸೇರುವ ಪತ್ರಿಕಾ ಕ್ಷೇತ್ರ ಉದ್ಯಮವಾಗಿದೆ. ಇದು ಈ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಗುತಿದೆ. ಇಂದಿನ ಸವಾಲಿನ ಸಂದರ್ಭದಲ್ಲಿ ಪತ್ರಿಕೆಗಳು ಉದ್ಯಮ ಆಗದೇ ಇದ್ದರೆ ಜನರನ್ನು ಇನ್ನಷ್ಟು ಹತ್ತಿರ ಮಾಡಬಹುದು. ಅದು ಸಾಧ್ಯವಾಗದೇ ಇದ್ದರೆ ಮುದ್ರಣ ಮಾಧ್ಯಮ ದೊಡ್ಡ ಸವಾಲನ್ನು ಎದುರಿಸಬೇಕಾದಿತು ಎಂದು ಅವರು ಹೇಳಿದರು.

ಪತ್ರಿಕಾ ಮೌಲ್ಯವನ್ನು ಕಾಪಾಡುವುದು ಮುಖ್ಯ: ಎನ್.ಭವಾನಿಶಂಕರ್

ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಟೀಕೆ ಮಾಡುವುದು ಮಾತ್ರವಲ್ಲ ಅಭಿವೃದ್ಧಿಗೂ ಪತ್ರಕರ್ತರು ಹೆಚ್ಚು ಗಮನ ಕೊಡುವುದು ಅಶಾದಾಯಕ ಬೆಳವಣಿಗೆ ಎಂದು ಹೇಳಿದರು. ಪತ್ರಿಕಾ ಮಾಧ್ಯಮಗಳು ಮೌಲ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ರಚನಾತ್ಮಕವಾಗಿರಬೇಕು. ನಿಷ್ಪಕ್ಷಪಾತ ಮತ್ತು ನಿರ್ಭೀತ ಮಾಧ್ಯಮಗಳು ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದು ಹೇಳಿದರು‌.

ಪತ್ರಿಕೆಗಳೆಂದರೆ ವಿಶ್ವಾಸಾರ್ಹತೆ- ಎಂ.ಆರ್.ಹರೀಶ್

Advertisement

ಸನ್ಮಾನ ನೆರವೇರಿಸಿ ಮಾತನಾಡಿದ ಸುಳ್ಯ ಪೊಲೀಸ್ ಉಪನಿರೀಕ್ಷಕ ಎಂ.ಆರ್.ಹರೀಶ್ ‘ಪತ್ರಿಕಾ ಸುದ್ದಿಗಳಿಗೆ ಇರುವ ವಿಶ್ವಾಸಾರ್ಹತೆ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ. ಅದು ಪ್ರತಿ ದಿನ ಮಾಹಿತಿಯ ದೊಡ್ಡ ಖಣಜವನ್ನೇ ಕಟ್ಟಿ ಕೊಡುತ್ತದೆ ಎಂದು ಹೇಳಿದರು. ಬ್ಯಾಂಕಿಂಗ್, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಕ್ಕೆ ಕರಾವಳಿ ಭಾಗದ ಕೊಡುಗೆ ಬಹಳ ದೊಡ್ಡದು. ಕೊರೋನಾ ಕಾಲದಲ್ಲಿ ಪತ್ರಕರ್ತರು ದೊಡ್ಡ ಸೇವೆಯನ್ನೇ ನೀಡಿದ್ದಾರೆ
ಎಂದು ಅವರು ಅಭಿಪ್ರಾಯಪಟ್ಟರು.

ಪತ್ರಿಕಾ ಕ್ಷೇತ್ರದ ಸೇವೆಗಾಗಿ ಶಂಕರ ಪೆರಾಜೆ ಅವರನ್ನು ಸನ್ಮಾನಿಸಲಾಯಿತು. ಡಾ.ಸುಂದರ ಕೇನಾಜೆ ಅವರನ್ನು ಗೌರವಿಸಲಾಯಿತು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು, ತೇಜೇಶ್ವರ ಕುಂದಲ್ಪಾಡಿ ಸನ್ಮಾನ ಪತ್ರ ವಾಚಿಸಿದರು, ಶಿವಪ್ರಸಾದ್ ಕೇರ್ಪಳ ವಂದಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

5 hours ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

6 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

13 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

22 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

22 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

23 hours ago