Advertisement
ಸುದ್ದಿಗಳು

ಹೊಸ ತಲೆಮಾರು ಓದಿನಿಂದ ದೂರ ಸರಿಯುವುದು ಪತ್ರಿಕಾ ಕ್ಷೇತ್ರಕ್ಕೆ ಸವಾಲು- ಡಾ.ಕೇನಾಜೆ : ಸುಳ್ಯದಲ್ಲಿ ಪತ್ರಿಕಾ ದಿನಾಚರಣೆ- ಸನ್ಮಾನ

Share

ಸುಳ್ಯ: ಆಧುನಿಕ ಯುಗದಲ್ಲಿ ಹೊಸ ತಲೆಮಾರು ಓದಿನಿಂದ ದೂರ ಸರಿಯುತಿರುವುದು ಪತ್ರಿಕಾ ಕ್ಷೇತ್ರದ ದೊಡ್ಡ ಸವಾಲು ಎಂದು ಪುತ್ತೂರು ಡಾ.ಶಿವರಾಮ ಕಾರಂತ ಬಾಲವನದ ಆಡಳಿತಾಧಿಕಾರಿ, ಲೇಖಕ ಡಾ.ಸುಂದರ ಕೇನಾಜೆ ಹೇಳಿದ್ದಾರೆ.

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಅವರು ಉಪನ್ಯಾಸ ನೀಡಿದರು. ಜಾಗೃತಿ, ಅರಿವು ಮೂಡಿಸುವ ಬದಲು ಹಲವು ಸಂದರ್ಭದಲ್ಲಿ ಮಾಧ್ಯಮಗಳು ಭಯಗೊಳಿಸುತ್ತವೆ. ಭಯಗೊಳಿಸುವ ವಾತಾವರಣದಿಂದ ಜನರು ದೂರ ಹೋಗುವ ಸಾಧ್ಯತೆ ಹೆಚ್ಚು. ಆದುದರಿಂದ ಅರಿವು, ತಿಳುವಳಿಕೆ ಮತ್ತು ಜಾಗೃತಿ ಮೂಡಿಸುವ ಮೂಲಕ ಮಾಧ್ಯಮಗಳು ಜನರನ್ನು ಹತ್ತಿರವಾಗಿಸಬೇಕು. ಶಿಕ್ಷಣ, ಆರೋಗ್ಯ, ಕಲೆ, ಸಾಹಿತ್ಯವನ್ನು ನಾವು ಎಂದೂ ಉದ್ಯಮ ಎಂದು ಪರಿಗಣಿಸಿಲ್ಲ. ಆದರೆ ಅದೇ ಸಾಲಿಗೆ ಸೇರುವ ಪತ್ರಿಕಾ ಕ್ಷೇತ್ರ ಉದ್ಯಮವಾಗಿದೆ. ಇದು ಈ ಕ್ಷೇತ್ರದಲ್ಲಿ ಹಲವು ಬದಲಾವಣೆಗಳಿಗೆ ಕಾರಣವಾಗುತಿದೆ. ಇಂದಿನ ಸವಾಲಿನ ಸಂದರ್ಭದಲ್ಲಿ ಪತ್ರಿಕೆಗಳು ಉದ್ಯಮ ಆಗದೇ ಇದ್ದರೆ ಜನರನ್ನು ಇನ್ನಷ್ಟು ಹತ್ತಿರ ಮಾಡಬಹುದು. ಅದು ಸಾಧ್ಯವಾಗದೇ ಇದ್ದರೆ ಮುದ್ರಣ ಮಾಧ್ಯಮ ದೊಡ್ಡ ಸವಾಲನ್ನು ಎದುರಿಸಬೇಕಾದಿತು ಎಂದು ಅವರು ಹೇಳಿದರು.

ಪತ್ರಿಕಾ ಮೌಲ್ಯವನ್ನು ಕಾಪಾಡುವುದು ಮುಖ್ಯ: ಎನ್.ಭವಾನಿಶಂಕರ್

ಕಾರ್ಯಕ್ರಮವನ್ನು ಉದ್ಘಾಟಿಸಿದ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಟೀಕೆ ಮಾಡುವುದು ಮಾತ್ರವಲ್ಲ ಅಭಿವೃದ್ಧಿಗೂ ಪತ್ರಕರ್ತರು ಹೆಚ್ಚು ಗಮನ ಕೊಡುವುದು ಅಶಾದಾಯಕ ಬೆಳವಣಿಗೆ ಎಂದು ಹೇಳಿದರು. ಪತ್ರಿಕಾ ಮಾಧ್ಯಮಗಳು ಮೌಲ್ಯವನ್ನು ಕಾಪಾಡಿಕೊಳ್ಳಬೇಕು ಮತ್ತು ರಚನಾತ್ಮಕವಾಗಿರಬೇಕು. ನಿಷ್ಪಕ್ಷಪಾತ ಮತ್ತು ನಿರ್ಭೀತ ಮಾಧ್ಯಮಗಳು ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದು ಹೇಳಿದರು‌.

ಪತ್ರಿಕೆಗಳೆಂದರೆ ವಿಶ್ವಾಸಾರ್ಹತೆ- ಎಂ.ಆರ್.ಹರೀಶ್

ಸನ್ಮಾನ ನೆರವೇರಿಸಿ ಮಾತನಾಡಿದ ಸುಳ್ಯ ಪೊಲೀಸ್ ಉಪನಿರೀಕ್ಷಕ ಎಂ.ಆರ್.ಹರೀಶ್ ‘ಪತ್ರಿಕಾ ಸುದ್ದಿಗಳಿಗೆ ಇರುವ ವಿಶ್ವಾಸಾರ್ಹತೆ ಬೇರೆಲ್ಲೂ ಸಿಗಲು ಸಾಧ್ಯವಿಲ್ಲ. ಅದು ಪ್ರತಿ ದಿನ ಮಾಹಿತಿಯ ದೊಡ್ಡ ಖಣಜವನ್ನೇ ಕಟ್ಟಿ ಕೊಡುತ್ತದೆ ಎಂದು ಹೇಳಿದರು. ಬ್ಯಾಂಕಿಂಗ್, ಸಾಹಿತ್ಯ ಮತ್ತು ಪತ್ರಿಕೋದ್ಯಮ ಕ್ಷೇತ್ರಕ್ಕೆ ಕರಾವಳಿ ಭಾಗದ ಕೊಡುಗೆ ಬಹಳ ದೊಡ್ಡದು. ಕೊರೋನಾ ಕಾಲದಲ್ಲಿ ಪತ್ರಕರ್ತರು ದೊಡ್ಡ ಸೇವೆಯನ್ನೇ ನೀಡಿದ್ದಾರೆ
ಎಂದು ಅವರು ಅಭಿಪ್ರಾಯಪಟ್ಟರು.

ಪತ್ರಿಕಾ ಕ್ಷೇತ್ರದ ಸೇವೆಗಾಗಿ ಶಂಕರ ಪೆರಾಜೆ ಅವರನ್ನು ಸನ್ಮಾನಿಸಲಾಯಿತು. ಡಾ.ಸುಂದರ ಕೇನಾಜೆ ಅವರನ್ನು ಗೌರವಿಸಲಾಯಿತು.
ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಕೋಶಾಧಿಕಾರಿ ಸತೀಶ್ ಹೊದ್ದೆಟ್ಟಿ ಉಪಸ್ಥಿತರಿದ್ದರು. ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿದರು. ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾದ ದುರ್ಗಾಕುಮಾರ್ ನಾಯರ್ ಕೆರೆ ಪ್ರಾಸ್ತಾವಿಕವಾಗಿ ಮಾತನಾಡಿದರು, ತೇಜೇಶ್ವರ ಕುಂದಲ್ಪಾಡಿ ಸನ್ಮಾನ ಪತ್ರ ವಾಚಿಸಿದರು, ಶಿವಪ್ರಸಾದ್ ಕೇರ್ಪಳ ವಂದಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

7 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

8 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

23 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

24 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago