ಹೊಸ ವರ್ಷದ ಶುಭಾರಂಭ: ಧರ್ಮಸ್ಥಳದಲ್ಲಿ ಭಕ್ತರ ಗಣ

January 1, 2020
7:51 PM

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನವಾದ ಬುಧವಾರ ನಾಡಿನೆಲ್ಲೆಡೆಯಿಂದ ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ದೇವರದರ್ಶನ ಪಡೆದು ಸೇವೆ ಸಲ್ಲಿಸಿದರು.

Advertisement
Advertisement

ಹಲವು ಮಂದಿ ಪಾದಯಾತ್ರೆಯಲ್ಲಿ ಬಂದರೆ, ಕೆಲವರು ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದು ತಮ್ಮ ಸೇವೆ ಸಲ್ಲಿಸಿದ್ದಾರೆ. ಅನೇಕ ಮಂದಿ “ಮುಡಿ” ಅರ್ಪಿಸಿ (ತಲೆಕೂದಲು ತೆಗೆಸಿ) ನೇತ್ರಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮಂಜೂಷಾ ವಸ್ತು ಸಂಗ್ರಹಾಲಯ, ಕಾರ್ ಮ್ಯೂಸಿಯಂ, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ವೀಕ್ಷಿಸಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಂಡರು.

ಬೆಂಗಳೂರಿನ ಭಕ್ತಾದಿಗಳಿಂದ ಪುಷ್ಪಾಲಂಕಾರ ಸೇವೆ: ಬೆಂಗಳೂರಿನ ಚಂದ್ರಾ ಲೇಔಟ್ ನಿವಾಸಿಗಳಾದ ಸಾಯಿ ಸರವಣ, ಗೋಪಾಲ ರಾವ್, ಆನಂದ, ಮಂಜುನಾಥರಾವ್, ಧರ್ಮಸ್ಥಳಕ್ಕೆ ಮಂಗಳವಾರವೇ ಬಂದು ದೇವಸ್ಥಾನ ಮತ್ತು ಹೆಗ್ಗಡೆಯವರ ಬೀಡು (ನಿವಾಸ) ಹಾಗೂ ಇತರ ಕಟ್ಟಡಗಳನ್ನು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿದ್ದಾರೆ.
ಭತ್ತದ ತೆನೆ, ಕಬ್ಬು, ದಾಳಿಂಬೆ, ಬಾಳೆ ದಿಂಡು, ತೆಂಗಿನಗರಿ, ತಾವರೆ, ಲಿಲಿಯಂ, ಆಂತೂರಿಯಂ, ಜಮೈಕಾನ್ ಎಲೆ ಸೇರಿದಂತೆ ಆರು ಲೋಡ್ ಪರಿಸರ ಸ್ನೇಹಿ ಅಲಂಕಾರಿಕ ಪರಿಕರಗಳನ್ನು ಬಳಸಿ ಆಕರ್ಷಕವಾಗಿ ಸಿಂಗರಿಸಿ ಸೇವೆ ಮಾಡಿ ಧನ್ಯತೆಯನ್ನು ಹೊಂದಿದ್ದಾರೆ. ಕಳೆದ 12 ವರ್ಷಗಳಿಂದ ಪ್ರತಿ ವರ್ಷ ಹೊಸವರ್ಷ ಶುಭಾರಂಭದ ದಿನ ತಾವು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಬಂದು ಅಲಂಕಾರ ಸೇವೆ ಮಾಡುತ್ತಿದ್ದು ತಮ್ಮ ವ್ಯವಹಾರದಲ್ಲಿ ಅಭಿವೃದ್ಧಿಯಾಗಿ, ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಸೇವಾಕರ್ತರ ತಂಡದ ನಾಯಕ ಎಸ್. ಗೋಪಾಲ ರಾವ್ ತಿಳಿಸಿದರು.

Advertisement

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group