Advertisement
ಕಾರ್ಯಕ್ರಮಗಳು

ಹೊಸ ವರ್ಷದ ಶುಭಾರಂಭ: ಧರ್ಮಸ್ಥಳದಲ್ಲಿ ಭಕ್ತರ ಗಣ

Share

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನವಾದ ಬುಧವಾರ ನಾಡಿನೆಲ್ಲೆಡೆಯಿಂದ ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ದೇವರದರ್ಶನ ಪಡೆದು ಸೇವೆ ಸಲ್ಲಿಸಿದರು.

ಹಲವು ಮಂದಿ ಪಾದಯಾತ್ರೆಯಲ್ಲಿ ಬಂದರೆ, ಕೆಲವರು ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದು ತಮ್ಮ ಸೇವೆ ಸಲ್ಲಿಸಿದ್ದಾರೆ. ಅನೇಕ ಮಂದಿ “ಮುಡಿ” ಅರ್ಪಿಸಿ (ತಲೆಕೂದಲು ತೆಗೆಸಿ) ನೇತ್ರಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮಂಜೂಷಾ ವಸ್ತು ಸಂಗ್ರಹಾಲಯ, ಕಾರ್ ಮ್ಯೂಸಿಯಂ, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ವೀಕ್ಷಿಸಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಂಡರು.

ಬೆಂಗಳೂರಿನ ಭಕ್ತಾದಿಗಳಿಂದ ಪುಷ್ಪಾಲಂಕಾರ ಸೇವೆ: ಬೆಂಗಳೂರಿನ ಚಂದ್ರಾ ಲೇಔಟ್ ನಿವಾಸಿಗಳಾದ ಸಾಯಿ ಸರವಣ, ಗೋಪಾಲ ರಾವ್, ಆನಂದ, ಮಂಜುನಾಥರಾವ್, ಧರ್ಮಸ್ಥಳಕ್ಕೆ ಮಂಗಳವಾರವೇ ಬಂದು ದೇವಸ್ಥಾನ ಮತ್ತು ಹೆಗ್ಗಡೆಯವರ ಬೀಡು (ನಿವಾಸ) ಹಾಗೂ ಇತರ ಕಟ್ಟಡಗಳನ್ನು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿದ್ದಾರೆ.
ಭತ್ತದ ತೆನೆ, ಕಬ್ಬು, ದಾಳಿಂಬೆ, ಬಾಳೆ ದಿಂಡು, ತೆಂಗಿನಗರಿ, ತಾವರೆ, ಲಿಲಿಯಂ, ಆಂತೂರಿಯಂ, ಜಮೈಕಾನ್ ಎಲೆ ಸೇರಿದಂತೆ ಆರು ಲೋಡ್ ಪರಿಸರ ಸ್ನೇಹಿ ಅಲಂಕಾರಿಕ ಪರಿಕರಗಳನ್ನು ಬಳಸಿ ಆಕರ್ಷಕವಾಗಿ ಸಿಂಗರಿಸಿ ಸೇವೆ ಮಾಡಿ ಧನ್ಯತೆಯನ್ನು ಹೊಂದಿದ್ದಾರೆ. ಕಳೆದ 12 ವರ್ಷಗಳಿಂದ ಪ್ರತಿ ವರ್ಷ ಹೊಸವರ್ಷ ಶುಭಾರಂಭದ ದಿನ ತಾವು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಬಂದು ಅಲಂಕಾರ ಸೇವೆ ಮಾಡುತ್ತಿದ್ದು ತಮ್ಮ ವ್ಯವಹಾರದಲ್ಲಿ ಅಭಿವೃದ್ಧಿಯಾಗಿ, ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಸೇವಾಕರ್ತರ ತಂಡದ ನಾಯಕ ಎಸ್. ಗೋಪಾಲ ರಾವ್ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೂರು ವರ್ಷಗಳಲ್ಲಿ 27% ಏರಿದ ಅಡಿಕೆ ಉತ್ಪಾದನಾ ವೆಚ್ಚ – ರೈತರಿಗೆ ಲಾಭ ಸಿಗಬೇಕಾದರೆ ಕನಿಷ್ಠ ಬೆಲೆ ಎಷ್ಟು ಇರಬೇಕು?

2023ರಿಂದ 2026ರವರೆಗೆ ಅಡಿಕೆ ಉತ್ಪಾದನಾ ವೆಚ್ಚ ಸುಮಾರು 27% ಏರಿಕೆಯಾಗಿದೆ. ಈ ಲೆಕ್ಕಾಚಾರದ…

6 hours ago

ಎಲ್ ನೀನೋ, ಲಾ ನೀನಾ ಮತ್ತು ಮಳೆ ಅನಿಶ್ಚಿತತೆ – ಮುಂದಿನ ಪೀಳಿಗೆಗಾಗಿ ಮಳೆನೀರು ಉಳಿಸುವುದು ಈಗಲೇ ಅನಿವಾರ್ಯ..!

ಎಲ್ ನೀನೋ ಮತ್ತು ಲಾ ನೀನಾ ಪ್ರಭಾವದಿಂದ ಮಳೆಯ ಮಾದರಿಯಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ.…

8 hours ago

ರಸ್ತೆ ಬದಿ ತ್ಯಾಜ್ಯ ಎಸೆದರೆ ಎಚ್ಚರ – ದಂಡ ಖಚಿತ | ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ₹5,000 ದಂಡ

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿಗೆ ₹5,000…

8 hours ago

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

14 hours ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

14 hours ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

17 hours ago