Advertisement
ಕಾರ್ಯಕ್ರಮಗಳು

ಹೊಸ ವರ್ಷದ ಶುಭಾರಂಭ: ಧರ್ಮಸ್ಥಳದಲ್ಲಿ ಭಕ್ತರ ಗಣ

Share

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಹೊಸ ವರ್ಷ ಶುಭಾರಂಭದ ದಿನವಾದ ಬುಧವಾರ ನಾಡಿನೆಲ್ಲೆಡೆಯಿಂದ ಸುಮಾರು ಐವತ್ತು ಸಾವಿರಕ್ಕೂ ಮಿಕ್ಕಿ ಭಕ್ತಾದಿಗಳು ದೇವರದರ್ಶನ ಪಡೆದು ಸೇವೆ ಸಲ್ಲಿಸಿದರು.

Advertisement

ಹಲವು ಮಂದಿ ಪಾದಯಾತ್ರೆಯಲ್ಲಿ ಬಂದರೆ, ಕೆಲವರು ಸೈಕಲ್ ಮೂಲಕ ಧರ್ಮಸ್ಥಳಕ್ಕೆ ಬಂದು ತಮ್ಮ ಸೇವೆ ಸಲ್ಲಿಸಿದ್ದಾರೆ. ಅನೇಕ ಮಂದಿ “ಮುಡಿ” ಅರ್ಪಿಸಿ (ತಲೆಕೂದಲು ತೆಗೆಸಿ) ನೇತ್ರಾವತಿ ನದಿಯಲ್ಲಿ ಪುಣ್ಯಸ್ನಾನ ಮಾಡಿದರು. ದೇವರ ದರ್ಶನದ ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಮಂಜೂಷಾ ವಸ್ತು ಸಂಗ್ರಹಾಲಯ, ಕಾರ್ ಮ್ಯೂಸಿಯಂ, ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನ ವೀಕ್ಷಿಸಿ ತಮ್ಮ ಜ್ಞಾನ ಕ್ಷಿತಿಜವನ್ನು ವಿಸ್ತರಿಸಿಕೊಂಡರು.

ಬೆಂಗಳೂರಿನ ಭಕ್ತಾದಿಗಳಿಂದ ಪುಷ್ಪಾಲಂಕಾರ ಸೇವೆ: ಬೆಂಗಳೂರಿನ ಚಂದ್ರಾ ಲೇಔಟ್ ನಿವಾಸಿಗಳಾದ ಸಾಯಿ ಸರವಣ, ಗೋಪಾಲ ರಾವ್, ಆನಂದ, ಮಂಜುನಾಥರಾವ್, ಧರ್ಮಸ್ಥಳಕ್ಕೆ ಮಂಗಳವಾರವೇ ಬಂದು ದೇವಸ್ಥಾನ ಮತ್ತು ಹೆಗ್ಗಡೆಯವರ ಬೀಡು (ನಿವಾಸ) ಹಾಗೂ ಇತರ ಕಟ್ಟಡಗಳನ್ನು ವಿವಿಧ ಪುಷ್ಪಗಳಿಂದ ಅಲಂಕಾರ ಮಾಡಿದ್ದಾರೆ.
ಭತ್ತದ ತೆನೆ, ಕಬ್ಬು, ದಾಳಿಂಬೆ, ಬಾಳೆ ದಿಂಡು, ತೆಂಗಿನಗರಿ, ತಾವರೆ, ಲಿಲಿಯಂ, ಆಂತೂರಿಯಂ, ಜಮೈಕಾನ್ ಎಲೆ ಸೇರಿದಂತೆ ಆರು ಲೋಡ್ ಪರಿಸರ ಸ್ನೇಹಿ ಅಲಂಕಾರಿಕ ಪರಿಕರಗಳನ್ನು ಬಳಸಿ ಆಕರ್ಷಕವಾಗಿ ಸಿಂಗರಿಸಿ ಸೇವೆ ಮಾಡಿ ಧನ್ಯತೆಯನ್ನು ಹೊಂದಿದ್ದಾರೆ. ಕಳೆದ 12 ವರ್ಷಗಳಿಂದ ಪ್ರತಿ ವರ್ಷ ಹೊಸವರ್ಷ ಶುಭಾರಂಭದ ದಿನ ತಾವು ಕುಟುಂಬ ಸಮೇತರಾಗಿ ಧರ್ಮಸ್ಥಳಕ್ಕೆ ಬಂದು ಅಲಂಕಾರ ಸೇವೆ ಮಾಡುತ್ತಿದ್ದು ತಮ್ಮ ವ್ಯವಹಾರದಲ್ಲಿ ಅಭಿವೃದ್ಧಿಯಾಗಿ, ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಸೇವಾಕರ್ತರ ತಂಡದ ನಾಯಕ ಎಸ್. ಗೋಪಾಲ ರಾವ್ ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

45 minutes ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

8 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

9 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

9 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

9 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

18 hours ago