Advertisement
The Rural Mirror ಕಾಳಜಿ

ಕೊರೋನಾ-ಒಮಿಕ್ರಾನ್‌ ಹೆಚ್ಚಳ ಭೀತಿ | ಮತ್ತೆ ಲಾಕ್ಡೌನ್‌ ಭಯ | ಲಾಕ್ಡೌನ್‌ ಗೆ ಪರ್ಯಾಯ ಏನಿದೆ ಎಚ್ಚರ ? | ಆಡಳಿತಕ್ಕೆ ಏನು ಸಲಹೆ ? |

Share

ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್‌ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್‌ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು  ಖಚಿತ. ಹೀಗಾಗಿ ಲಾಕ್ಡೌನ್‌ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು  ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.

ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್‌ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್‌ ಮಾತ್ರವೇ ಪರಿಹಾರ ಎಂದು  ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್‌ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು  ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ… 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

17 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

24 hours ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

24 hours ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

24 hours ago

ರೈತರಿಗೆ ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ಘೋಷಣೆ : ರೈತರ ಆರ್ಥಿಕ ಭದ್ರತೆಗೆ ಕೇಂದ್ರ ಬದ್ಧ

ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…

24 hours ago

ವನ್ಯಜೀವಿಗಳ ಸಂತಾನ ನಿಯಂತ್ರಣಕ್ಕೆ ತಜ್ಞರ ಚರ್ಚೆ ಅಗತ್ಯ

ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…

24 hours ago