ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು ಖಚಿತ. ಹೀಗಾಗಿ ಲಾಕ್ಡೌನ್ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.
ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್ ಮಾತ್ರವೇ ಪರಿಹಾರ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ…
Advertisement
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…
ಈ ವರ್ಷ ದೇಶದಲ್ಲಿ ಬರಗಾಲ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರನ್ನು ರಕ್ಷಿಸಲು ಎಲ್ಲರೂ…
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…