ಮತ್ತೆ ಕೊರೋನಾ ಭಯ ಹೆಚ್ಚಾಗಿದೆ. ಅದರ ಜೊತೆಗೇ ಒಮಿಕ್ರಾನ್ ಕೂಡಾ ಹಬ್ಬುತ್ತಿದೆ. ಸರ್ಕಾರಿ ದಾಖಲೆಗಳ ಪ್ರಕಾರ ಪ್ರತೀ ದಿನ ರೋಗದ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಸರ್ಕಾರವಾಗಿ ಈ ರೋಗ ನಿಯಂತ್ರಣ ಮಾಡಲೇಬೇಕಿದೆ. ಮತ್ತೆ ಲಾಕ್ಡೌನ್ ಆದರೆ ಜನ ಅದರಲ್ಲೂ ಸಾಮಾನ್ಯ ಜನರು ಸಂಕಷ್ಟ ಅನುಭವಿಸುವುದು ಖಚಿತ. ಹೀಗಾಗಿ ಲಾಕ್ಡೌನ್ ಬದಲಾಗಿ ಪರ್ಯಾಯ ದಾರಿಗಳು ಏನಿದೆ ? ರೋಗ ಹರಡುವುದು ತಪ್ಪಿಸಲು ಏನು ಮಾಡಬಹುದು ? ಗ್ರಾಮೀಣ ಭಾಗದಿಂದ ತೊಡಗಿ ನಗರದವರೆಗೆ ಏನು ಮಾಡಬಹುದು ? ಇಂತಹದ್ದೊಂದು ಯೋಚನೆ ಇದ್ದರೆ ಹೇಳಿ ಸರ್ಕಾರಕ್ಕೆ ನಾವೆಲ್ಲರೂ ಸೇರಿ ಗಮನಕ್ಕೆ ತರೋಣ.
ಏಕೆಂದರೆ ಸರ್ಕಾರಕ್ಕೂ, ಆಡಳಿತಕ್ಕೂ ಕೊರೋನಾ ಲಾಕ್ಡೌನ್ ಈಗ ಬೇಕಾಗಿಲ್ಲ. ಆದರೆ ಜವಾಬ್ದಾರಿ ಹಾಗೂ ನಾಗರಿಕರ ಹಿತದೃಷ್ಟಿಯಿಂದ ಅನಿವಾರ್ಯ ಸ್ಥಿತಿ ಇದೆ. ಅಂತರಾಷ್ಟ್ರೀಯ ಮಟ್ಟದಲ್ಲೂ ರೋಗ ಹರಡದಂತೆ ಲಾಕ್ಡೌನ್ ಮಾತ್ರವೇ ಪರಿಹಾರ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದ ಲಾಕ್ಡೌನ್ ಹೊರತಾದ ಯಾವ ಮಾರ್ಗ ಇದ್ದರೂ ಸರ್ಕಾರ ಪರಿಗಣಿಸುವುದು ಕಷ್ಟವಾದರೂ ಸಡಿಲಿಕೆ ಮಾಡಬಹುದು. ಅಂತಹ ಯೋಚನೆಗಳು ಇದ್ದರೆ ಎಲ್ಲರೂ ಸರ್ಕಾರದ ಗಮನಕ್ಕೆ ತರಬಹುದು. ಪ್ರತಿಭಟನೆಗಳ ಬದಲಾಗಿ ರಚನಾತ್ಮಕ ಸಲಹೆ, ಯೋಚನೆಗಳನ್ನು ಹೇಳುವ ಅವಕಾಶ ಪ್ರಜಾಪ್ರಭುತ್ವದಲ್ಲಿ ಇದೆ. ಈಗ ಈ ಪ್ರಯತ್ನ ನಾವೆಲ್ಲರೂ ಮಾಡೋಣ, ಏಕೆಂದರೆ ನಮ್ಮೆಲ್ಲರ ಹಿತಕ್ಕಾಗಿ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…