ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಗೆ ಸಿಬಿಐ ಬಿಗ್ ಶಾಕ್ ನೀಡಿದ್ದು, ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮತ್ತು ಡಿ ಕೆ ಸುರೇಶ್ ಅವರ ಮನೆ, ಕಚೇರಿ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಬಿಐ ದಾಳಿ ಮಾಡಿದೆ.
ಸೋಮವಾರ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲದಹಳ್ಳಿಯಲ್ಲಿರುವ ನಿವಾಸದ ಮೇಲೆಯೂ ದಾಳಿಯನ್ನು ನಡೆಸಲಾಗಿದೆ. 7 ಸಿಬಿಐ ಅಧಿಕಾರಿಗಳು ಇನ್ನೋವಾ ಕಾರಿನಲ್ಲಿ ಕನಕಪುರದ ನಿವಾಸಕ್ಕೆ ಆಗಮಿಸಿದ್ದಾರೆ. ಡಿ. ಕೆ. ಶಿವಕುಮಾರ್ ಸದಾಶಿವನಗರ ನಿವಾಸ, ಕನಕಪುರ ನಿವಾಸ ಮತ್ತು ಡಿ. ಕೆ. ಸುರೇಶ್ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಸದಾಶಿವನಗರ ನಿವಾಸದಲ್ಲಿ ಐವರು ಸಿಬಿಐ ಅಧಿಕಾರಿಗಳು ಇದ್ದಾರೆ.ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ.ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…