#NobelPrize | 2023ರ ನೋಬೆಲ್‌ ಪ್ರಶಸ್ತಿ ಪ್ರಕಟ | ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಕಾರಿಕೊ, ವೈಸ್‌ಮನ್‌ಗೆ ನೋಬೆಲ್ ಪುರಸ್ಕಾರ |

October 2, 2023
5:42 PM
ನ್ಯೂಕ್ಲಿಯೊಸೈಡ್ ಬೇಸ್ ಮಾರ್ಪಾಡುಗಳಿಗೆ ಸಂಬಂಧಿಸಿದ ಅವರ ಸಂಶೋಧನೆಗಳಿಗಾಗಿ ಈ ಗೌರವ ನೀಡಲಾಗಿದೆ. ಈ ಆವಿಷ್ಕಾರವು ಕರೋನವೈರಸ್ ವಿರುದ್ಧ ಪರಿಣಾಮಕಾರಿ MRNA ಲಸಿಕೆಗಳನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡಿತು. ನೊಬೆಲ್ ಸಮಿತಿಯ ಕಾರ್ಯದರ್ಶಿ ಥಾಮಸ್ ಪರ್ಲ್‌ಮನ್ ಕೊರೊಲಿನ್ಸ್ಕಾ ಅವರು ಈ ಪ್ರಶಸ್ತಿಯನ್ನು ನೀಡಿದರು.

ಕೋವಿಡ್-19 ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರವಹಿಸಿರುವ ಹಂಗೇರಿ ಹಾಗೂ ಅಮೆರಿಕದ ವಿಜ್ಞಾನಿಗಳಾದ ಕ್ಯಾಲಿಟನ್ ಕಾರಿಕೊ nಹಾಗೂ ಡ್ರೂ ವೈಸ್‌ಮನ್ ಅವರಿಗೆ 2023ನೇ ಸಾಲಿನ ವೈದ್ಯಕೀಯ ವಿಭಾಗದ ನೋಬೆಲ್ ಪುರಸ್ಕಾರ ದೊರೆತಿದೆ.

ವೈಜ್ಞಾನಿಕ ಜಗತ್ತಿನಲ್ಲಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಡನ್‌ನ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್ ವೈದ್ಯಕೀಯ ವಿಶ್ವವಿದ್ಯಾಲಯದ ನೊಬೆಲ್ ಅಸೆಂಬ್ಲಿ ಆಯ್ಕೆ ಮಾಡಿದೆ. ಪ್ರಶಸ್ತಿ ವಿಜೇತರಿಗೆ 8.31 ಕೋಟಿ ರೂ. ನಗದು ಬಹುಮಾನ ರೂಪದಲ್ಲಿ ಸಿಗಲಿದೆ. ಕೋವಿಡ್-19 ವಿರುದ್ಧ ಪರಿಣಾಮಕಾರಿಯಾದ ಎಮ್‌ಆರ್‌ಎನ್‌ಎ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಕಾರಿಕೊ ಹಾಗೂ ವೈಸ್‌ಮನ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಹೀಗಾಗಿ 2023ರ ನೋಬೆಲ್ ಪುರಸ್ಕಾರವನ್ನು ಅವರಿಗೆ ನೀಡಲು ನಿರ್ಧರಿಸಿದ್ದಾಗಿ ಆಯ್ಕೆಯ ಸಮಿತಿ ತಿಳಿಸಿದೆ.

ಕಟಾಲಿನ್ ಕರಿಕೊ ಅವರು 2022 ರವರೆಗೆ ಬಯೋಎನ್‌ಟೆಕ್‌ನಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸದ್ದರು. ಆರ್‌ಎನ್‌ಎ ಪ್ರೋಟೀನ್ ಮುಖ್ಯಸ್ಥರಾಗಿದ್ದರು. ನಂತರ ಒಂದು ಸಂಶೋಧನ ಕಂಪನಿಯ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಹಂಗೇರಿಯ ಸ್ಜೆಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಇದರ ಜತೆಗೆ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪೆರೆಲ್‌ಮನ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

ಇನ್ನು ಕಟಾಲಿನ್ ಕರಿಕೊ ಅವರ ಜತೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ ಪಡೆದವರು ಡ್ರೂ ವೈಸ್‌ಮನ್‌. ಇವರು ಪೆರೆಲ್‌ಮನ್ ಲಸಿಕೆ ಸಂಶೋಧನ ಕೇಂದ್ರದ ಪ್ರಾಧ್ಯಾಪಕರಾಗಿದ್ದಾರೆ. ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್‌ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳು ಅಭೂತಪೂರ್ವ. ಕೊರೊನಾ ಸಮಯದಲ್ಲಿ mRNA ಕೋವಿಡ್ -19 ಲಸಿಕೆಯು ಹೇಗೆ ಪ್ರತಿರಕ್ಷಣಾ ವ್ಯವಸ್ಥೆ ಉಂಟು ಮಾಡುತ್ತದೆ ಎಂಬುದನ್ನು ಸಂಶೋಧನೆ ನಡೆಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror