Advertisement
MIRROR FOCUS

#NobelPrize | 2023ರ ನೋಬೆಲ್‌ ಪ್ರಶಸ್ತಿ ಪ್ರಕಟ | ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ ಕಾರಿಕೊ, ವೈಸ್‌ಮನ್‌ಗೆ ನೋಬೆಲ್ ಪುರಸ್ಕಾರ |

Share

ಕೋವಿಡ್-19 ಲಸಿಕೆಗಳನ್ನು ಅಭಿವೃದ್ಧಿಪಡಿಸುವಲ್ಲಿ ಮಹತ್ವದ ಪಾತ್ರವಹಿಸಿರುವ ಹಂಗೇರಿ ಹಾಗೂ ಅಮೆರಿಕದ ವಿಜ್ಞಾನಿಗಳಾದ ಕ್ಯಾಲಿಟನ್ ಕಾರಿಕೊ nಹಾಗೂ ಡ್ರೂ ವೈಸ್‌ಮನ್ ಅವರಿಗೆ 2023ನೇ ಸಾಲಿನ ವೈದ್ಯಕೀಯ ವಿಭಾಗದ ನೋಬೆಲ್ ಪುರಸ್ಕಾರ ದೊರೆತಿದೆ.

ವೈಜ್ಞಾನಿಕ ಜಗತ್ತಿನಲ್ಲಿ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಡನ್‌ನ ಕರೋಲಿನ್ಸ್ಕಾ ಇನ್‌ಸ್ಟಿಟ್ಯೂಟ್ ವೈದ್ಯಕೀಯ ವಿಶ್ವವಿದ್ಯಾಲಯದ ನೊಬೆಲ್ ಅಸೆಂಬ್ಲಿ ಆಯ್ಕೆ ಮಾಡಿದೆ. ಪ್ರಶಸ್ತಿ ವಿಜೇತರಿಗೆ 8.31 ಕೋಟಿ ರೂ. ನಗದು ಬಹುಮಾನ ರೂಪದಲ್ಲಿ ಸಿಗಲಿದೆ. ಕೋವಿಡ್-19 ವಿರುದ್ಧ ಪರಿಣಾಮಕಾರಿಯಾದ ಎಮ್‌ಆರ್‌ಎನ್‌ಎ ಲಸಿಕೆಯನ್ನು ಅಭಿವೃದ್ಧಿಪಡಿಸುವಲ್ಲಿ ಕಾರಿಕೊ ಹಾಗೂ ವೈಸ್‌ಮನ್ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಹೀಗಾಗಿ 2023ರ ನೋಬೆಲ್ ಪುರಸ್ಕಾರವನ್ನು ಅವರಿಗೆ ನೀಡಲು ನಿರ್ಧರಿಸಿದ್ದಾಗಿ ಆಯ್ಕೆಯ ಸಮಿತಿ ತಿಳಿಸಿದೆ.

ಕಟಾಲಿನ್ ಕರಿಕೊ ಅವರು 2022 ರವರೆಗೆ ಬಯೋಎನ್‌ಟೆಕ್‌ನಲ್ಲಿ ಹಿರಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸದ್ದರು. ಆರ್‌ಎನ್‌ಎ ಪ್ರೋಟೀನ್ ಮುಖ್ಯಸ್ಥರಾಗಿದ್ದರು. ನಂತರ ಒಂದು ಸಂಶೋಧನ ಕಂಪನಿಯ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಹಂಗೇರಿಯ ಸ್ಜೆಡ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಇದರ ಜತೆಗೆ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ಪೆರೆಲ್‌ಮನ್ ಸ್ಕೂಲ್ ಆಫ್ ಮೆಡಿಸಿನ್‌ನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

ಇನ್ನು ಕಟಾಲಿನ್ ಕರಿಕೊ ಅವರ ಜತೆಗೆ ವೈದ್ಯಕೀಯ ನೊಬೆಲ್ ಪ್ರಶಸ್ತಿ ಪಡೆದವರು ಡ್ರೂ ವೈಸ್‌ಮನ್‌. ಇವರು ಪೆರೆಲ್‌ಮನ್ ಲಸಿಕೆ ಸಂಶೋಧನ ಕೇಂದ್ರದ ಪ್ರಾಧ್ಯಾಪಕರಾಗಿದ್ದಾರೆ. ಕಟಾಲಿನ್ ಕರಿಕೊ ಮತ್ತು ಡ್ರೂ ವೈಸ್‌ಮನ್‌ ವೈದ್ಯಕೀಯ ಕ್ಷೇತ್ರದಲ್ಲಿ ಮಾಡಿದ ಸಾಧನೆಗಳು ಅಭೂತಪೂರ್ವ. ಕೊರೊನಾ ಸಮಯದಲ್ಲಿ mRNA ಕೋವಿಡ್ -19 ಲಸಿಕೆಯು ಹೇಗೆ ಪ್ರತಿರಕ್ಷಣಾ ವ್ಯವಸ್ಥೆ ಉಂಟು ಮಾಡುತ್ತದೆ ಎಂಬುದನ್ನು ಸಂಶೋಧನೆ ನಡೆಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

22 minutes ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

29 minutes ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

44 minutes ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

48 minutes ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

18 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago