1 ಲೀಟರ್ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲು…!

June 3, 2019
3:01 PM
Advertisement

ಎಲಿಮಲೆ :  1 ಲೀಟರ್ ಶುದ್ಧ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲಾಗುತ್ತಿದೆ. ನೋಡಿದರೆ ಇದರ ವ್ಯವಸ್ಥೆಯೇ ಹಾಗೆ. ಬೇಕೋ ಬೇಡವೋ 2 ರೂಪಾಯಿಗೆ 6 ನೀರು ಬರುತ್ತದೆ. ಇಂತಹದ್ದೊಂದು ವ್ಯವಸ್ಥೆ ಈಗ ಚರ್ಚೆಗೆ ಕಾರಣವಾಗಿದೆ.

Advertisement
Advertisement
Advertisement

ಬರದಿಂದ ಕಂಗೆಟ್ಟಿರುವಾಗ ನೀರಿನ ದಾಹ ತೀರಿಸಲು ನಿರ್ಮಿಸಲಾದ ಶುದ್ದ ನೀರಿನ ಘಟಕವೊಂದು ಜೀವಜಲದ ಪೋಲಿಗೆ ಕಾರಣವಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಗುಡಿಯುವ ನೀರಿನ ಯೋಜನೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ದೇವಚಳ್ಳ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕದಲ್ಲಿ 1 ಲೀಟರ್ ಶುದ್ಧ ನೀರು ಪಡೆಯಬೇಕೆಂದರೆ 6 ಲೀಟರ್ ನೀರು ಪೋಲಾಗುತ್ತಿದೆ. ದೇವಚಳ್ಳ ಪರಿಸರದಲ್ಲಿ ನೀರಿಗೆ ಹಾಹಾಕಾರ ಇರುವಾಗ ಇಂತದ್ದೊಂದು ವ್ಯವಸ್ಥೆ ಪಂಚಾಯತ್‍ಗೆ ತಲೆನೋವಾಗಿ ಪರಿಣಮಿಸಿದೆ.

Advertisement

ವಿವಿಧ ಕಡೆಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು ಯಾವೊಂದು ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆದರೆ ದೇವಚಳ್ಳ ಗ್ರಾ.ಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಮುತುವರ್ಜಿಯಿಂದ ನೀರಿನ ಘಟಕ 2 ರೂ.ಗೆ 20 ಲೀಟರ್ ನೀರು ಪೂರೈಸುವ ಕಾರ್ಯ ಮಾಡಿದೆ. ಆದರೆ 1 ಲೀಟರ್ ನೀರನ್ನು ಶುದ್ದೀಕರಿಸಲು 6.ಲೀ ನಷ್ಟು ನೀರನ್ನು ಘಟಕಕ್ಕೆ ಪೂರೈಸಬೇಕಾಗು ತ್ತದೆ. ತಾಂತ್ರಿಕ ದೋಷದಿಂದಾದ ಈ ಅಚಾತುರ್ಯಕ್ಕೆ ಗ್ರಾ.ಪಂ ಬೆಚ್ಚಿ ಬಿದ್ದಿದೆ. ಅಷ್ಟಕ್ಕಷ್ಟೇ ಇರುವ ನೀರು ಈ ರೀತಿ ಪೋಲಾದರೆ ಘಟಕಕ್ಕೆ ನೀರು ಪೂರೈಸುವುದು ಹೇಗೆ? ಎಂಬ ಪ್ರಶ್ನೆ ಸಿಬ್ಬಂದಿಯವರದ್ದು.

ಅದೂ ಅಲ್ಲದೆ 2 ರೂಪಾಯಿ ಹಾಕಿ 1 ಲೀಟರ್ ಬೇಕು ಎಂದರೂ 6 ಲೀಟರ್ ನೀರು ಪೋಲಾಗುತ್ತಿದೆ. ಹೀಗಾಗಿ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ.

Advertisement

ಪೋಲಾಗಲು ಕಾರಣವೇನು?:

ನೀರು ಶುದ್ಧೀಕರಣ ಘಟಕಕ್ಕೆ ಪೂರೈಸಲಾಗುವ ನೀರಿನಲ್ಲಿ ಹೆಚ್ಚು ಉಪ್ಪು ನೀರು ಕರಗಿದ್ದಾಗ ಪೋಲಾಗು ವ ನೀರಿನ ಪ್ರಮಾಣ ಹೆಚ್ಚಾಗಿರುತ್ತದೆ. ಸಮುದ್ರ ತೀರ ಪ್ರದೇಶಗಳಲ್ಲಿ ಶುದ್ಧ ನೀರನ್ನು ಪಡೆಯುವಾಗ ಈ ರೀತಿ ನೀರು ಪೋಲಾಗುವ ಸಾಧ್ಯತೆಗಳಿದೆ. ಆದರೆ ಸುಳ್ಯ ತಾಲೂಕಿನಲ್ಲಿ ಲಭ್ಯವಿರುವ ನೀರಿನಲ್ಲಿ ಉಪ್ಪಿನಾಂಶ ಹೆಚ್ಚಾಗಿರುವ ಸಾಧ್ಯತೆ ಕಡಿಮೆ ಇದ್ದು ನೀರು ಪೋಲಾಗಲು ಅಪೂರ್ಣ ತಾಂತ್ರಿಕ ರಚನೆಯೇ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಾರೆ.

Advertisement

 

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror