Advertisement
ಸುದ್ದಿಗಳು

1 ಲೀಟರ್ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲು…!

Share

ಎಲಿಮಲೆ :  1 ಲೀಟರ್ ಶುದ್ಧ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲಾಗುತ್ತಿದೆ. ನೋಡಿದರೆ ಇದರ ವ್ಯವಸ್ಥೆಯೇ ಹಾಗೆ. ಬೇಕೋ ಬೇಡವೋ 2 ರೂಪಾಯಿಗೆ 6 ನೀರು ಬರುತ್ತದೆ. ಇಂತಹದ್ದೊಂದು ವ್ಯವಸ್ಥೆ ಈಗ ಚರ್ಚೆಗೆ ಕಾರಣವಾಗಿದೆ.

ಬರದಿಂದ ಕಂಗೆಟ್ಟಿರುವಾಗ ನೀರಿನ ದಾಹ ತೀರಿಸಲು ನಿರ್ಮಿಸಲಾದ ಶುದ್ದ ನೀರಿನ ಘಟಕವೊಂದು ಜೀವಜಲದ ಪೋಲಿಗೆ ಕಾರಣವಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಗುಡಿಯುವ ನೀರಿನ ಯೋಜನೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ದೇವಚಳ್ಳ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕದಲ್ಲಿ 1 ಲೀಟರ್ ಶುದ್ಧ ನೀರು ಪಡೆಯಬೇಕೆಂದರೆ 6 ಲೀಟರ್ ನೀರು ಪೋಲಾಗುತ್ತಿದೆ. ದೇವಚಳ್ಳ ಪರಿಸರದಲ್ಲಿ ನೀರಿಗೆ ಹಾಹಾಕಾರ ಇರುವಾಗ ಇಂತದ್ದೊಂದು ವ್ಯವಸ್ಥೆ ಪಂಚಾಯತ್‍ಗೆ ತಲೆನೋವಾಗಿ ಪರಿಣಮಿಸಿದೆ.

ವಿವಿಧ ಕಡೆಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು ಯಾವೊಂದು ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆದರೆ ದೇವಚಳ್ಳ ಗ್ರಾ.ಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಮುತುವರ್ಜಿಯಿಂದ ನೀರಿನ ಘಟಕ 2 ರೂ.ಗೆ 20 ಲೀಟರ್ ನೀರು ಪೂರೈಸುವ ಕಾರ್ಯ ಮಾಡಿದೆ. ಆದರೆ 1 ಲೀಟರ್ ನೀರನ್ನು ಶುದ್ದೀಕರಿಸಲು 6.ಲೀ ನಷ್ಟು ನೀರನ್ನು ಘಟಕಕ್ಕೆ ಪೂರೈಸಬೇಕಾಗು ತ್ತದೆ. ತಾಂತ್ರಿಕ ದೋಷದಿಂದಾದ ಈ ಅಚಾತುರ್ಯಕ್ಕೆ ಗ್ರಾ.ಪಂ ಬೆಚ್ಚಿ ಬಿದ್ದಿದೆ. ಅಷ್ಟಕ್ಕಷ್ಟೇ ಇರುವ ನೀರು ಈ ರೀತಿ ಪೋಲಾದರೆ ಘಟಕಕ್ಕೆ ನೀರು ಪೂರೈಸುವುದು ಹೇಗೆ? ಎಂಬ ಪ್ರಶ್ನೆ ಸಿಬ್ಬಂದಿಯವರದ್ದು.

ಅದೂ ಅಲ್ಲದೆ 2 ರೂಪಾಯಿ ಹಾಕಿ 1 ಲೀಟರ್ ಬೇಕು ಎಂದರೂ 6 ಲೀಟರ್ ನೀರು ಪೋಲಾಗುತ್ತಿದೆ. ಹೀಗಾಗಿ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ.

ಪೋಲಾಗಲು ಕಾರಣವೇನು?:

ನೀರು ಶುದ್ಧೀಕರಣ ಘಟಕಕ್ಕೆ ಪೂರೈಸಲಾಗುವ ನೀರಿನಲ್ಲಿ ಹೆಚ್ಚು ಉಪ್ಪು ನೀರು ಕರಗಿದ್ದಾಗ ಪೋಲಾಗು ವ ನೀರಿನ ಪ್ರಮಾಣ ಹೆಚ್ಚಾಗಿರುತ್ತದೆ. ಸಮುದ್ರ ತೀರ ಪ್ರದೇಶಗಳಲ್ಲಿ ಶುದ್ಧ ನೀರನ್ನು ಪಡೆಯುವಾಗ ಈ ರೀತಿ ನೀರು ಪೋಲಾಗುವ ಸಾಧ್ಯತೆಗಳಿದೆ. ಆದರೆ ಸುಳ್ಯ ತಾಲೂಕಿನಲ್ಲಿ ಲಭ್ಯವಿರುವ ನೀರಿನಲ್ಲಿ ಉಪ್ಪಿನಾಂಶ ಹೆಚ್ಚಾಗಿರುವ ಸಾಧ್ಯತೆ ಕಡಿಮೆ ಇದ್ದು ನೀರು ಪೋಲಾಗಲು ಅಪೂರ್ಣ ತಾಂತ್ರಿಕ ರಚನೆಯೇ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

12 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

13 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

17 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago