ಎಲಿಮಲೆ : 1 ಲೀಟರ್ ಶುದ್ಧ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲಾಗುತ್ತಿದೆ. ನೋಡಿದರೆ ಇದರ ವ್ಯವಸ್ಥೆಯೇ ಹಾಗೆ. ಬೇಕೋ ಬೇಡವೋ 2 ರೂಪಾಯಿಗೆ 6 ನೀರು ಬರುತ್ತದೆ. ಇಂತಹದ್ದೊಂದು ವ್ಯವಸ್ಥೆ ಈಗ ಚರ್ಚೆಗೆ ಕಾರಣವಾಗಿದೆ.
ಬರದಿಂದ ಕಂಗೆಟ್ಟಿರುವಾಗ ನೀರಿನ ದಾಹ ತೀರಿಸಲು ನಿರ್ಮಿಸಲಾದ ಶುದ್ದ ನೀರಿನ ಘಟಕವೊಂದು ಜೀವಜಲದ ಪೋಲಿಗೆ ಕಾರಣವಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಗುಡಿಯುವ ನೀರಿನ ಯೋಜನೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ದೇವಚಳ್ಳ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕದಲ್ಲಿ 1 ಲೀಟರ್ ಶುದ್ಧ ನೀರು ಪಡೆಯಬೇಕೆಂದರೆ 6 ಲೀಟರ್ ನೀರು ಪೋಲಾಗುತ್ತಿದೆ. ದೇವಚಳ್ಳ ಪರಿಸರದಲ್ಲಿ ನೀರಿಗೆ ಹಾಹಾಕಾರ ಇರುವಾಗ ಇಂತದ್ದೊಂದು ವ್ಯವಸ್ಥೆ ಪಂಚಾಯತ್ಗೆ ತಲೆನೋವಾಗಿ ಪರಿಣಮಿಸಿದೆ.
ವಿವಿಧ ಕಡೆಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು ಯಾವೊಂದು ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆದರೆ ದೇವಚಳ್ಳ ಗ್ರಾ.ಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಮುತುವರ್ಜಿಯಿಂದ ನೀರಿನ ಘಟಕ 2 ರೂ.ಗೆ 20 ಲೀಟರ್ ನೀರು ಪೂರೈಸುವ ಕಾರ್ಯ ಮಾಡಿದೆ. ಆದರೆ 1 ಲೀಟರ್ ನೀರನ್ನು ಶುದ್ದೀಕರಿಸಲು 6.ಲೀ ನಷ್ಟು ನೀರನ್ನು ಘಟಕಕ್ಕೆ ಪೂರೈಸಬೇಕಾಗು ತ್ತದೆ. ತಾಂತ್ರಿಕ ದೋಷದಿಂದಾದ ಈ ಅಚಾತುರ್ಯಕ್ಕೆ ಗ್ರಾ.ಪಂ ಬೆಚ್ಚಿ ಬಿದ್ದಿದೆ. ಅಷ್ಟಕ್ಕಷ್ಟೇ ಇರುವ ನೀರು ಈ ರೀತಿ ಪೋಲಾದರೆ ಘಟಕಕ್ಕೆ ನೀರು ಪೂರೈಸುವುದು ಹೇಗೆ? ಎಂಬ ಪ್ರಶ್ನೆ ಸಿಬ್ಬಂದಿಯವರದ್ದು.
ಅದೂ ಅಲ್ಲದೆ 2 ರೂಪಾಯಿ ಹಾಕಿ 1 ಲೀಟರ್ ಬೇಕು ಎಂದರೂ 6 ಲೀಟರ್ ನೀರು ಪೋಲಾಗುತ್ತಿದೆ. ಹೀಗಾಗಿ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ.
ಪೋಲಾಗಲು ಕಾರಣವೇನು?:
ನೀರು ಶುದ್ಧೀಕರಣ ಘಟಕಕ್ಕೆ ಪೂರೈಸಲಾಗುವ ನೀರಿನಲ್ಲಿ ಹೆಚ್ಚು ಉಪ್ಪು ನೀರು ಕರಗಿದ್ದಾಗ ಪೋಲಾಗು ವ ನೀರಿನ ಪ್ರಮಾಣ ಹೆಚ್ಚಾಗಿರುತ್ತದೆ. ಸಮುದ್ರ ತೀರ ಪ್ರದೇಶಗಳಲ್ಲಿ ಶುದ್ಧ ನೀರನ್ನು ಪಡೆಯುವಾಗ ಈ ರೀತಿ ನೀರು ಪೋಲಾಗುವ ಸಾಧ್ಯತೆಗಳಿದೆ. ಆದರೆ ಸುಳ್ಯ ತಾಲೂಕಿನಲ್ಲಿ ಲಭ್ಯವಿರುವ ನೀರಿನಲ್ಲಿ ಉಪ್ಪಿನಾಂಶ ಹೆಚ್ಚಾಗಿರುವ ಸಾಧ್ಯತೆ ಕಡಿಮೆ ಇದ್ದು ನೀರು ಪೋಲಾಗಲು ಅಪೂರ್ಣ ತಾಂತ್ರಿಕ ರಚನೆಯೇ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490