Advertisement
ಸುದ್ದಿಗಳು

1 ಲೀಟರ್ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲು…!

Share

ಎಲಿಮಲೆ :  1 ಲೀಟರ್ ಶುದ್ಧ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲಾಗುತ್ತಿದೆ. ನೋಡಿದರೆ ಇದರ ವ್ಯವಸ್ಥೆಯೇ ಹಾಗೆ. ಬೇಕೋ ಬೇಡವೋ 2 ರೂಪಾಯಿಗೆ 6 ನೀರು ಬರುತ್ತದೆ. ಇಂತಹದ್ದೊಂದು ವ್ಯವಸ್ಥೆ ಈಗ ಚರ್ಚೆಗೆ ಕಾರಣವಾಗಿದೆ.

ಬರದಿಂದ ಕಂಗೆಟ್ಟಿರುವಾಗ ನೀರಿನ ದಾಹ ತೀರಿಸಲು ನಿರ್ಮಿಸಲಾದ ಶುದ್ದ ನೀರಿನ ಘಟಕವೊಂದು ಜೀವಜಲದ ಪೋಲಿಗೆ ಕಾರಣವಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಗುಡಿಯುವ ನೀರಿನ ಯೋಜನೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ದೇವಚಳ್ಳ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕದಲ್ಲಿ 1 ಲೀಟರ್ ಶುದ್ಧ ನೀರು ಪಡೆಯಬೇಕೆಂದರೆ 6 ಲೀಟರ್ ನೀರು ಪೋಲಾಗುತ್ತಿದೆ. ದೇವಚಳ್ಳ ಪರಿಸರದಲ್ಲಿ ನೀರಿಗೆ ಹಾಹಾಕಾರ ಇರುವಾಗ ಇಂತದ್ದೊಂದು ವ್ಯವಸ್ಥೆ ಪಂಚಾಯತ್‍ಗೆ ತಲೆನೋವಾಗಿ ಪರಿಣಮಿಸಿದೆ.

ವಿವಿಧ ಕಡೆಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು ಯಾವೊಂದು ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆದರೆ ದೇವಚಳ್ಳ ಗ್ರಾ.ಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಮುತುವರ್ಜಿಯಿಂದ ನೀರಿನ ಘಟಕ 2 ರೂ.ಗೆ 20 ಲೀಟರ್ ನೀರು ಪೂರೈಸುವ ಕಾರ್ಯ ಮಾಡಿದೆ. ಆದರೆ 1 ಲೀಟರ್ ನೀರನ್ನು ಶುದ್ದೀಕರಿಸಲು 6.ಲೀ ನಷ್ಟು ನೀರನ್ನು ಘಟಕಕ್ಕೆ ಪೂರೈಸಬೇಕಾಗು ತ್ತದೆ. ತಾಂತ್ರಿಕ ದೋಷದಿಂದಾದ ಈ ಅಚಾತುರ್ಯಕ್ಕೆ ಗ್ರಾ.ಪಂ ಬೆಚ್ಚಿ ಬಿದ್ದಿದೆ. ಅಷ್ಟಕ್ಕಷ್ಟೇ ಇರುವ ನೀರು ಈ ರೀತಿ ಪೋಲಾದರೆ ಘಟಕಕ್ಕೆ ನೀರು ಪೂರೈಸುವುದು ಹೇಗೆ? ಎಂಬ ಪ್ರಶ್ನೆ ಸಿಬ್ಬಂದಿಯವರದ್ದು.

ಅದೂ ಅಲ್ಲದೆ 2 ರೂಪಾಯಿ ಹಾಕಿ 1 ಲೀಟರ್ ಬೇಕು ಎಂದರೂ 6 ಲೀಟರ್ ನೀರು ಪೋಲಾಗುತ್ತಿದೆ. ಹೀಗಾಗಿ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ.

ಪೋಲಾಗಲು ಕಾರಣವೇನು?:

ನೀರು ಶುದ್ಧೀಕರಣ ಘಟಕಕ್ಕೆ ಪೂರೈಸಲಾಗುವ ನೀರಿನಲ್ಲಿ ಹೆಚ್ಚು ಉಪ್ಪು ನೀರು ಕರಗಿದ್ದಾಗ ಪೋಲಾಗು ವ ನೀರಿನ ಪ್ರಮಾಣ ಹೆಚ್ಚಾಗಿರುತ್ತದೆ. ಸಮುದ್ರ ತೀರ ಪ್ರದೇಶಗಳಲ್ಲಿ ಶುದ್ಧ ನೀರನ್ನು ಪಡೆಯುವಾಗ ಈ ರೀತಿ ನೀರು ಪೋಲಾಗುವ ಸಾಧ್ಯತೆಗಳಿದೆ. ಆದರೆ ಸುಳ್ಯ ತಾಲೂಕಿನಲ್ಲಿ ಲಭ್ಯವಿರುವ ನೀರಿನಲ್ಲಿ ಉಪ್ಪಿನಾಂಶ ಹೆಚ್ಚಾಗಿರುವ ಸಾಧ್ಯತೆ ಕಡಿಮೆ ಇದ್ದು ನೀರು ಪೋಲಾಗಲು ಅಪೂರ್ಣ ತಾಂತ್ರಿಕ ರಚನೆಯೇ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

2 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

3 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

17 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

18 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

18 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

19 hours ago