Advertisement
ಸುದ್ದಿಗಳು

1 ಲೀಟರ್ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲು…!

Share

ಎಲಿಮಲೆ :  1 ಲೀಟರ್ ಶುದ್ಧ ನೀರು ಪಡೆಯಲು ಹೋದರೆ 6 ಲೀಟರ್ ನೀರು ಪೋಲಾಗುತ್ತಿದೆ. ನೋಡಿದರೆ ಇದರ ವ್ಯವಸ್ಥೆಯೇ ಹಾಗೆ. ಬೇಕೋ ಬೇಡವೋ 2 ರೂಪಾಯಿಗೆ 6 ನೀರು ಬರುತ್ತದೆ. ಇಂತಹದ್ದೊಂದು ವ್ಯವಸ್ಥೆ ಈಗ ಚರ್ಚೆಗೆ ಕಾರಣವಾಗಿದೆ.

ಬರದಿಂದ ಕಂಗೆಟ್ಟಿರುವಾಗ ನೀರಿನ ದಾಹ ತೀರಿಸಲು ನಿರ್ಮಿಸಲಾದ ಶುದ್ದ ನೀರಿನ ಘಟಕವೊಂದು ಜೀವಜಲದ ಪೋಲಿಗೆ ಕಾರಣವಾಗುತ್ತಿದೆ. ರಾಷ್ಟ್ರೀಯ ಗ್ರಾಮೀಣ ಗುಡಿಯುವ ನೀರಿನ ಯೋಜನೆಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ದೇವಚಳ್ಳ ಗ್ರಾಮ ಪಂಚಾಯತ್ ಆವರಣದಲ್ಲಿ ನಿರ್ಮಿಸಲಾದ ಶುದ್ಧ ನೀರಿನ ಘಟಕದಲ್ಲಿ 1 ಲೀಟರ್ ಶುದ್ಧ ನೀರು ಪಡೆಯಬೇಕೆಂದರೆ 6 ಲೀಟರ್ ನೀರು ಪೋಲಾಗುತ್ತಿದೆ. ದೇವಚಳ್ಳ ಪರಿಸರದಲ್ಲಿ ನೀರಿಗೆ ಹಾಹಾಕಾರ ಇರುವಾಗ ಇಂತದ್ದೊಂದು ವ್ಯವಸ್ಥೆ ಪಂಚಾಯತ್‍ಗೆ ತಲೆನೋವಾಗಿ ಪರಿಣಮಿಸಿದೆ.

ವಿವಿಧ ಕಡೆಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲಾಗಿದ್ದು ಯಾವೊಂದು ಕಾಮಗಾರಿಗಳೂ ಪೂರ್ಣಗೊಂಡಿಲ್ಲ. ಆದರೆ ದೇವಚಳ್ಳ ಗ್ರಾ.ಪಂ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಮುತುವರ್ಜಿಯಿಂದ ನೀರಿನ ಘಟಕ 2 ರೂ.ಗೆ 20 ಲೀಟರ್ ನೀರು ಪೂರೈಸುವ ಕಾರ್ಯ ಮಾಡಿದೆ. ಆದರೆ 1 ಲೀಟರ್ ನೀರನ್ನು ಶುದ್ದೀಕರಿಸಲು 6.ಲೀ ನಷ್ಟು ನೀರನ್ನು ಘಟಕಕ್ಕೆ ಪೂರೈಸಬೇಕಾಗು ತ್ತದೆ. ತಾಂತ್ರಿಕ ದೋಷದಿಂದಾದ ಈ ಅಚಾತುರ್ಯಕ್ಕೆ ಗ್ರಾ.ಪಂ ಬೆಚ್ಚಿ ಬಿದ್ದಿದೆ. ಅಷ್ಟಕ್ಕಷ್ಟೇ ಇರುವ ನೀರು ಈ ರೀತಿ ಪೋಲಾದರೆ ಘಟಕಕ್ಕೆ ನೀರು ಪೂರೈಸುವುದು ಹೇಗೆ? ಎಂಬ ಪ್ರಶ್ನೆ ಸಿಬ್ಬಂದಿಯವರದ್ದು.

ಅದೂ ಅಲ್ಲದೆ 2 ರೂಪಾಯಿ ಹಾಕಿ 1 ಲೀಟರ್ ಬೇಕು ಎಂದರೂ 6 ಲೀಟರ್ ನೀರು ಪೋಲಾಗುತ್ತಿದೆ. ಹೀಗಾಗಿ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಿತರು ಗಮನಹರಿಸಬೇಕಿದೆ.

ಪೋಲಾಗಲು ಕಾರಣವೇನು?:

ನೀರು ಶುದ್ಧೀಕರಣ ಘಟಕಕ್ಕೆ ಪೂರೈಸಲಾಗುವ ನೀರಿನಲ್ಲಿ ಹೆಚ್ಚು ಉಪ್ಪು ನೀರು ಕರಗಿದ್ದಾಗ ಪೋಲಾಗು ವ ನೀರಿನ ಪ್ರಮಾಣ ಹೆಚ್ಚಾಗಿರುತ್ತದೆ. ಸಮುದ್ರ ತೀರ ಪ್ರದೇಶಗಳಲ್ಲಿ ಶುದ್ಧ ನೀರನ್ನು ಪಡೆಯುವಾಗ ಈ ರೀತಿ ನೀರು ಪೋಲಾಗುವ ಸಾಧ್ಯತೆಗಳಿದೆ. ಆದರೆ ಸುಳ್ಯ ತಾಲೂಕಿನಲ್ಲಿ ಲಭ್ಯವಿರುವ ನೀರಿನಲ್ಲಿ ಉಪ್ಪಿನಾಂಶ ಹೆಚ್ಚಾಗಿರುವ ಸಾಧ್ಯತೆ ಕಡಿಮೆ ಇದ್ದು ನೀರು ಪೋಲಾಗಲು ಅಪೂರ್ಣ ತಾಂತ್ರಿಕ ರಚನೆಯೇ ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

3 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

5 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

14 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

14 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

14 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

19 hours ago