Advertisement
MIRROR FOCUS

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ | ಒಂದೇ ದಿನ 1.06 ಕೋಟಿ ಲೀಟರ್ ಹಾಲು ಸಂಗ್ರಹ

Share

ಕರ್ನಾಟಕ ಹಾಲು ಒಕ್ಕೂಟ – ಕೆಎಂಎಫ್  ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್ ಹಾಲು ಸಂಗ್ರಹಿಸುವ ಮೂಲಕ ರಾಜ್ಯದ ಡೈರಿ ವಲಯದಲ್ಲಿ ಹೊಸ ದಾಖಲೆ ಸೃಷ್ಟಿಸಿದೆ. ಅನುಕೂಲಕರವಾದ ಮುಂಗಾರು ಮಳೆ ಮತ್ತು ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು ಕೆಎಂಎಫ್ ಗೆ ಸಾಧ್ಯವಾಗಿದೆ.

ಕೆಎಂಎಫ್ ಪ್ರಕಾರ, ಇದು ಕಳೆದ ವರ್ಷ ದಿನವೊಂದರಲ್ಲಿ ಸಂಗ್ರಹಿಸಿದ ಗರಿಷ್ಠ ಹಾಲಿಗಿಂತಲೂ ಹೆಚ್ಚು. ಕಳೆದ ವರ್ಷ ಜೂನ್ 28 ರಂದು 1 ಕೋಟಿ ಲೀಟರ್ ಹಾಲು ಸಂಗ್ರಹಿಸಲಾಗಿತ್ತು. ಆನಂತರ ದೈನಂದಿನ ಸರಾಸರಿ ಸಂಗ್ರಹ ಪ್ರಮಾಣದಲ್ಲಿ ಗಮನಾರ್ಹ ಏರಿಕೆ ಕಂಡಿತ್ತು. ಇದರೊಂದಿಗೆ, ಹಾಲು ಉತ್ಪಾದಿಸುವ ಪ್ರಮುಖ ರಾಜ್ಯವಾಗಿ ಕರ್ನಾಟಕ ತನ್ನ ಛಾಪು ಮುಂದುವರಿಸಿದೆ. ರಾಜ್ಯದ ಹಲವಾರು ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿರುವುದು ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಕೆಎಂಎಫ್ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಮೇವಿನ ಲಭ್ಯತೆ, ಜಾನುವಾರುಗಳಲ್ಲಿ ಪೌಷ್ಟಿಕತೆ, ಆರೋಗ್ಯ ಸುಧಾರಣೆ ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಕೊಡುಗೆ ನೀಡಿವೆ. ಜೂನ್ 1 ರಂದು ವಿಶ್ವ ಹಾಲು ದಿನಾಚರಣೆಯ ಅಂಗವಾಗಿ, ಕೆಎಂಎಫ್ ತನ್ನ ಜನಪ್ರಿಯ ನಂದಿನಿ ಬ್ರ್ಯಾಂಡ್ ಅಡಿಯಲ್ಲಿ 18 ಹೊಸ ಬಗೆಯ ಕೇಕ್‌ಗಳು ಮತ್ತು ಇತರೇ ಹಾಲಿನ ಉತ್ಪನ್ನಗಳನ್ನು ಬಿಡುಗಡೆ ಮಾಡಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

1 hour ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

22 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

22 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago