Advertisement
ರಾಜ್ಯ

ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು

Share

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.

ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

4 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

8 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago