Advertisement
ರಾಜ್ಯ

ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು

Share

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.

Advertisement

ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

13 minutes ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

16 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

17 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

3 days ago