Advertisement
ರಾಜ್ಯ

ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು

Share

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.

ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

12 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

20 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

21 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

21 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago