Advertisement
ರಾಜ್ಯ

ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು

Share

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.

ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

4 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

12 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago