Advertisement
ರಾಜ್ಯ

ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು

Share

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

Advertisement
Advertisement

ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.

Advertisement

ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.

Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

3 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

3 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

6 hours ago

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ | ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ |

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

24 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? | ಪರಿಸರಿದಿಂದ ನಮಗಾಗುವ ಪ್ರಯೋಜನವೇನು..? |

ಪರಿಸರದಿಂದ ಏನೆಲ್ಲಾ ಪ್ರಯೋಜನ ಇದೆ ಎಂಬುದರ ಬಗ್ಗೆ ಪರಿಸರ ಪರಿವಾರದ ಮಾಹಿತಿ ಇಲ್ಲಿದೆ...

1 day ago