ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂ ವಹಿವಾಟು ನಡೆಸಿದ ಖಾದಿ ಉತ್ಪನ್ನಗಳು

June 9, 2023
4:45 PM

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಉತ್ಪನ್ನಗಳು ಸ್ವಾತಂತ್ರ್ಯ ನಂತರ ಇದೇ ಮೊದಲ ಬಾರಿಗೆ 1.34 ಲಕ್ಷ ಕೋಟಿ ರೂಪಾಯಿ ವಹಿವಾಟಿ ಗಡಿ ದಾಟಿದೆ. ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲಿ ಕುಶಲಕರ್ಮಿಗಳು ತಯಾರಿಸಿದ ಸ್ವದೇಶೀ ಖಾದಿ ಉತ್ಪನ್ನಗಳ ಮಾರಾಟ ಕಳೆದ ಒಂಬತ್ತು ಹಣಕಾಸು ವರ್ಷಗಳಲ್ಲಿ 332% ಅಭೂತಪೂರ್ವ ಬೆಳವಣಿಗೆಯನ್ನು ಕಂಡಿದೆ ಎಂದು ಎಂಎಸ್‌ಎಂಇ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಖಾದಿ ಉತ್ಪನ್ನಗಳ ದಾಖಲೆಯ ಮಾರಾಟದ ಬಳಿಕ ಕೆವಿಐಸಿ ಗ್ರಾಮೀಣ ಪ್ರದೇಶದಲ್ಲಿ 9,54,899 ಹೊಸ ಉದ್ಯೋಗಗಳನ್ನು ಸೃಷ್ಟಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಸಚಿವಾಲಯ ಹೇಳಿದೆ.

Advertisement

ಕಳೆದ 9 ವರ್ಷಗಳಲ್ಲಿ ಖಾದಿ ಬಟ್ಟೆಗಳ ಉತ್ಪಾದನೆಯಲ್ಲಿ ಬೆಳವಣಿಗೆ ಕಂಡುಬಂದಿದೆ. 2013-14ರ ಆರ್ಥಿಕ ವರ್ಷದಲ್ಲಿ ಖಾದಿ ಬಟ್ಟೆಗಳ ಉತ್ಪಾದನೆ 811 ಕೋಟಿ ರೂ.ಗಳಷ್ಟಾಗಿದ್ದು, 2022-23ರ ಆರ್ಥಿಕ ವರ್ಷದಲ್ಲಿ ಶೇ.260 ರಷ್ಟು ಏರಿಕೆಯೊಂದಿಗೆ 2916 ಕೋಟಿ ರೂ.ಗಳನ್ನು ಮುಟ್ಟಿದೆ, ಇದು ಇದುವರೆಗಿನ ಅತ್ಯುತ್ತಮ ಸಾಧನೆಯಾಗಿದೆ.

ಕೆವಿಐಸಿ ಅಧ್ಯಕ್ಷ ಮನೋಜ್ ಕುಮಾರ್ ಈ ಸಾಧನೆಯನ್ನು ಮಹಾತ್ಮ ಗಾಂಧಿಯವರ ಪ್ರೇರಣೆ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯ ಮಾರ್ಗದರ್ಶನ ಮತ್ತು ದೇಶದ ಹಳ್ಳಿಗಳಲ್ಲಿ ಕೆಲಸ ಮಾಡುವ ಕುಶಲಕರ್ಮಿಗಳ ಶ್ರಮಕ್ಕೆ ದೊರೆತ ಮನ್ನಣೆ ಎಂದು ಬಣ್ಣಿಸಿದ್ದಾರೆ. “ಪ್ರಧಾನಿ ಮೋದಿ ಅವರು ದೇಶ ಮತ್ತು ವಿದೇಶಗಳಲ್ಲಿ ಪ್ರತಿ ವೇದಿಕೆಯಲ್ಲಿ ಖಾದಿಯನ್ನು ಪ್ರಚಾರ ಮಾಡಿದ್ದಾರೆ, ಇದರಿಂದಾಗಿ ಖಾದಿ ಜನಪ್ರಿಯತೆಯ ಹೊಸ ಉತ್ತುಂಗವನ್ನು ತಲುಪಿದೆ” ಎಂದಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror