ಇತ್ತೀಚೆಗೆ ಕಾಳಸಂತೆ ಅನ್ನುವುದು ಪ್ರತೀ ಕ್ಷೇತ್ರದಲ್ಲೂ ತಮ್ಮ ಕದಂಬ ಬಾಹುಗಳನ್ನು ಚಾಚಿದೆ. ಎಷ್ಟರಮಟ್ಟಿಗೆ ಅಂದರೆ ಅದನ್ನು ನಿಲ್ಲಿಸಲೂ ಸಾಧ್ಯವೇ ಇಲ್ಲ ಅನ್ನುವಷ್ಟರ ಮಟ್ಟಿಗೆ. ಏನೇ ವಸ್ತು ತೆಗೆದುಕೊಳ್ಳಿ ಅಲ್ಲಿ ದುಬ್ಲಿಕೇಟ್ ಇದ್ದೇ ಇರುತ್ತೆ. ಅದರಲ್ಲೂ ಹಣ್ಣು, ತರಕಾರಿ, ಅಥವಾ ಯಾವುದೇ ಆಹಾರ ಪದಾರ್ಥಗಳಂತೂ ವಿಷಮಯ. ಹಾಗಿದ್ದ ಮೇಲೆ ಅದಕ್ಕೆ ಬಳಸುವ ರಾಸಾಯನಿಕ ಅಧಿಕೃತವಾಗಿದೆಯೇ ? ಇದೊಂದು ಸಂದೇಹ ಈಗ ಇದೆ.
ಹೌದು….. ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಬರೋಬ್ಬರಿ 1.5 ಕೋಟಿ ರೂಪಾಯಿ ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕ ಪತ್ತೆಯಾಗಿದೆ. ಒಂದು ವಾರದಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ 1.5 ಕೋಟಿ ಮೌಲ್ಯದ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅನಧಿಕೃತ ಮತ್ತು ಕಡಿಮೆ ಗುಣಮಟ್ಟದ ಕೀಟನಾಶಕಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದರಿಂದ ಈ ಭಾಗದ ರೈತರಿಗೆ ಗಮನಾರ್ಹ ನಷ್ಟ ಉಂಟಾಗುತ್ತಿತ್ತು. ಇದನ್ನು ತಪ್ಪಿಸಲು ಇಲಾಖೆ ತನಿಖೆಯನ್ನು ಶುರು ಮಾಡಿತ್ತು. ಇದರ ಫಲವಾಗಿ ಬರೋಬ್ಬರಿ 1.5 ಕೋಟಿ ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕವನ್ನ ವಶಕ್ಕೆ ಪಡಿಸಿಕೊಳ್ಳಲಾಗಿದೆ.
ಹಲವಾರು ಕೀಟನಾಶಕ ತಯಾರಿಕಾ ಕಂಪನಿಗಳು ಮತ್ತು ಇತರ ಸಂಸ್ಥೆಗಳು ತಮ್ಮ ಉತ್ಪನ್ನಗಳನ್ನು ಇತರರೊಂದಿಗೆ ಮಾರಾಟ ಮಾಡುತ್ತವೆ. ನಿಯಮಗಳ ಅಡಿಯಲ್ಲಿ, ಈ ಕಂಪನಿಗಳು ನಿರ್ದಿಷ್ಟ ಅವಧಿಯ ನಂತರ ತಮ್ಮ ಅನುಮತಿಗಳನ್ನು ನವೀಕರಿಸಬೇಕಾಗುತ್ತದೆ. ಸಾಮಾನ್ಯ ಪ್ರಕ್ರಿಯೆಯ ಭಾಗವಾಗಿ, ಅಧಿಕಾರಿಗಳು ದಾಳಿಗಳನ್ನು ನಡೆಸುತ್ತಿದ್ದಾರೆ ಮತ್ತು ಅಧಿಕಾರ ಅವಧಿ ಮುಗಿದ ಉತ್ಪನ್ನಗಳ ಮಾರಾಟವನ್ನು ನಿಲ್ಲಿಸುತ್ತಿದ್ದಾರೆ.
ಈ ಘಟನೆ ನಡೆದಿರೋದು ನಮ್ಮ ಪಕ್ಕದ ರಾಜ್ಯ ಆಂಧ್ರದಲ್ಲಿಯಾದರು ಇದು ಕರ್ನಾಟಕಕ್ಕೆ ಬಂದಿರಲಿಕ್ಕಿಲ್ಲ ಅನ್ನುವ ಯೋಚನೆ ಬೇಡ. ಈಗಾಗಲೇ ನಮ್ಮ ರಾಜ್ಯದಲ್ಲೇ ಅದೆಷ್ಟು ಕಡೆ ಇಂತ ಅನಧಿಕೃತ ರಾಸಯನಿಕವನ್ನು ಕೊಂಡುಕೊಂಡು ನಮ್ಮ ರೈತರು ಮೋಸ ಹೋಗಿದ್ದಾರೋ ಗೊತ್ತಿಲ್ಲ.
ಸಂಪೂರ್ಣ ತಪಾಸಣೆಯನ್ನು ಖಚಿತಪಡಿಸಿಕೊಳ್ಳಲು, ಗುಂಟೂರು ನಗರ ಮತ್ತು ಜಿಲ್ಲೆಯಾದ್ಯಂತ ಐದು ಫ್ಲೈಯಿಂಗ್ ಸ್ಕ್ವಾಡ್ಗಳನ್ನು ರಚಿಸಲಾಗಿದೆ. ಅಧಿಕಾರಿಗಳು ದಾಳಿ ನಡೆಸುವುದರ ಜೊತೆಗೆ ಪರವಾನಗಿ ಪಡೆದ ಅಂಗಡಿಗಳಿಂದ ಅಧಿಕೃತ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸುವ ಮಹತ್ವದ ಬಗ್ಗೆ ರೈತರಿಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಸಹ ಆಯೋಜಿಸುತ್ತಿದ್ದಾರೆ.
ಅನಧಿಕೃತ ಮೂಲಗಳಿಂದ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸಲು ರೈತರಿಗೆ ಸಲಹೆ ನೀಡಲಾಗಿದೆ. ಅಗ್ಗದ ಮತ್ತು ಕಡಿಮೆ-ಗುಣಮಟ್ಟದ ಕೀಟನಾಶಕಗಳು ಉತ್ಪನ್ನದ ಗುಣಮಟ್ಟದ ಮೇಲೆ ಪರಿಣಾಮ ಬೀರುವುದಲ್ಲದೆ ಪರಿಸರ ಮತ್ತು ಮಾನವನ ಆರೋಗ್ಯಕ್ಕೆ ಹಾನಿಯುನ್ನು ಉಂಟುಮಾಡುತ್ತವೆ. ರೈತರಿಗೆ ಅನಧಿಕೃತ ಉತ್ಪನ್ನಗಳನ್ನು ಮಾರಾಟ ಮಾಡುವ ತಪ್ಪಿತಸ್ಥರ ವಿರುದ್ಧ ಅಧಿಕಾರಿಗಳು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ .
ಈ ಕುರಿತು ನಮ್ಮ ರೈತರು ಎಚ್ಚರಿಕೆ ವಹಿಸಬೇಕು.. ಹಾಗೇ ಸರ್ಕಾರ ಕೂಡ ಅಂತವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡು ರೈತರ ಹಿತ ಕಾಪಾಡಲು ಮುಂದಾಗಬೇಕು
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಯಗಳನ್ನು ಸಂಪರ್ಕಿಸಿ 9535156490
ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…
ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…
ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…