Advertisement
ಸುದ್ದಿಗಳು

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

Share

ರಾಜ್ಯದಲ್ಲಿ ಅಡಿಕೆ ಮಾರುಕಟ್ಟೆ ಮತ್ತು ಬೆಳೆಗಾರರ ನಡುವೆ ಆತಂಕ ಮೂಡಿಸಿರುವ ರೀತಿಯಲ್ಲಿ, ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಡಿಕೆಗೆ ಅಪಾಯಕಾರಿ ಬಣ್ಣಗಳನ್ನು ಮಿಶ್ರಣ ಮಾಡಿರುವ ಸಾಧ್ಯತೆಯ ಬಗ್ಗೆಯೂ ಅಧಿಕಾರಿಗಳು ಗಮನ ಹರಿಸಿದ್ದಾರೆ.

ರಾಜ್ಯದಲ್ಲಿ ಪಾನ್‌ ಮಸಾಲಾ, ಗುಟ್ಕಾ ಸೇರಿದಂತೆ ವಿವಿಧ ಉತ್ಪನ್ನಗಳಿಗೆ ಅಡಿಕೆಯ ಬಳಕೆ ಇರುವ ಹಿನ್ನೆಲೆಯಲ್ಲಿ, ಹೊರಗಿನಿಂದ ಅಕ್ರಮವಾಗಿ ತರಲಾಗುತ್ತಿರುವ ಅಥವಾ ಕೃತಕವಾಗಿ ತಯಾರಿಸಲಾಗುತ್ತಿರುವ ಅಡಿಕೆ ನಿಜವಾದ ಅಡಿಕೆ ಬೆಳೆಗಾರರ ಮಾರುಕಟ್ಟೆ ಮೇಲೆ ಪರಿಣಾಮ ಬೀರುವ ಆತಂಕವಿದೆ.

ಕೋಲಾರ ಸಮೀಪದ ಚೆಕ್‌ಪೋಸ್ಟ್‌ನಲ್ಲಿ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಅಡಿಕೆಯನ್ನು ಅಧಿಕಾರಿಗಳು ಪರಿಶೀಲಿಸಿದಾಗ ಈ ಅಡಿಕೆ ಪತ್ತೆಯಾಗಿದೆ. ಸುಮಾರು 10 ಟನ್‌ ತೂಕದ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ಆರೋಗ್ಯ ಸಚಿವ ಯು ಟಿ ಖಾದರ್ ಅವರ ಸೂಚನೆಯಂತೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಆಹಾರ ಉತ್ಪನ್ನಗಳಲ್ಲಿ ಬಳಸುವ ಬಣ್ಣಗಳು ಮತ್ತು ಅವುಗಳ ಸುರಕ್ಷತೆ ಕುರಿತಂತೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.‌ ವಶಪಡಿಸಿಕೊಂಡ ಅಡಿಕೆಯಲ್ಲಿ ವಿವಿಧ ರೀತಿಯ ಬಣ್ಣಗಳ ಬಳಕೆಯಾಗಿರುವುದು ಕಂಡುಬಂದಿದ್ದು, ಇಂತಹ ವಸ್ತುಗಳು ಗ್ರಾಹಕರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ.

ಅಡಿಕೆ ಬೆಳೆಗಾರರಿಗೆ ಏಕೆ ಆತಂಕ? :  ಅಡಿಕೆ ಮಾರುಕಟ್ಟೆಯಲ್ಲಿ ಈಗಾಗಲೇ ಆಮದು ಅಡಿಕೆ, ಅಕ್ರಮ ಸಾಗಾಟ ಮತ್ತು ಕಡಿಮೆ ಗುಣಮಟ್ಟದ ಅಡಿಕೆಯ ವಿಚಾರಗಳು ಚರ್ಚೆಯಲ್ಲಿವೆ. ಇಂತಹ ಸಂದರ್ಭದಲ್ಲಿ ಸಿಂಥೆಟಿಕ್‌ ಅಥವಾ ಕೃತಕವಾಗಿ ತಯಾರಿಸಿದ , ರಾಸಾಯನಿಕ ಮಿಶ್ರಿತ ಅಡಿಕೆ ಮಾರುಕಟ್ಟೆಗೆ ಪ್ರವೇಶಿಸಿದರೆ, ಗುಣಮಟ್ಟದ ಅಡಿಕೆ ಉತ್ಪಾದಿಸುವ ರೈತರಿಗೆ ಮಾರುಕಟ್ಟೆಯಲ್ಲಿ ಅನ್ಯಾಯದ ಸ್ಪರ್ಧೆ ಎದುರಾಗುವ ಸಾಧ್ಯತೆ ಇದೆ.

ಆದ್ದರಿಂದ ವಶಪಡಿಸಿಕೊಂಡಿರುವ ಅಡಿಕೆಯ ಮೂಲ, ಸಾಗಾಟದ ಜಾಲ, ಅದರಲ್ಲಿ ಬಳಸಿರುವ ವಸ್ತುಗಳು ಹಾಗೂ ಮಾರುಕಟ್ಟೆಯಲ್ಲಿ ಅದರ ವಿತರಣೆಯ ಕುರಿತು ಸಮಗ್ರ ತನಿಖೆ ನಡೆಯಬೇಕಿದೆ, ಈಗಲೇ ಸಿಂಥೆಟಿಕ್‌ ಅಡಿಕೆಯೇ ಎನ್ನುವಂತಿಲ್ಲ ಎಂದೂ  ಅಧಿಕಾರಿಗಳು ಹೇಳಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.

Around 10 tonnes of synthetic or “China areca nut” allegedly mixed with artificial colours were seized near Kolar while being transported towards Bengaluru, according to the newspaper report. The authorities are investigating the source and supply network, while the incident has raised concerns about consumer safety and the possible impact of such products on genuine areca nut growers and the market.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

9 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

10 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

20 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago